ಸಾಂದರ್ಭಿಕ ಚಿತ್ರ 
ರಾಜ್ಯ

ಪಾಂಡವಪುರ: ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಡಬ್ಬಲ್ ಮರ್ಡರ್

ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಡಬ್ಬಲ್ ಮರ್ಡರ್ ನಡೆದಿರುವ ಘಟನೆ ಪಾಂಡವಪುರ ತಾಲ್ಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ

ಮಂಡ್ಯ: ಮಹಾ ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ಡಬ್ಬಲ್ ಮರ್ಡರ್ ನಡೆದಿರುವ ಘಟನೆ ಪಾಂಡವಪುರ ತಾಲ್ಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ

ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಕೊಲೆಯಾದವರಾಗಿದ್ದು, ಇದೇ ಗ್ರಾಮದ ಕೃಷ್ಣ, ಸುರೇಶ್ ಹಾಗೂ ಸಹಚರರಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಮಹದೇಶ್ವರಪುರ ಗ್ರಾಮದ ಕೋಳಿ ಸುರೇಶ ಹಾಗೂ ನಾಗರಾಜು ಅವರನ್ನು ಹಳೇ ದ್ವೇಷದ ಹಿನ್ನಲೆಯಲ್ಲಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ

ಇದೇ ಗ್ರಾಮದ ಕೃಷ್ಣ, ಸುರೇಶ್ ಹಾಗೂ ಸಹಚರರಿಂದ ಕೃತ್ಯನಡೆದಿದೆ ಎಂದು ಆರೋಪಿಸಲಾಗಿದ್ದು ಈ ಸಂಬಂಧ ರೌಡಿ ಕೃಷ್ಣನನ್ನು   ರಾತ್ರಿಯೇ ಪೊಲೀಸರ ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ ಆರೋಪಿಗಳು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕೊಲೆಗೆ ಪ್ರೇಮ ಪ್ರಕರಣ ಹಾಗೂ ಹಣಕಾಸು ವ್ಯವಹಾರ ಕಾರಣ ಎಂಬ ಶಂಕೆವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪಾಂಡವಪುರ  ಪೊಲೀಸರ ಭೇಟಿನೀಡಿ, ಪರಿಶೀಲನೆನಡೆಸಿದರು.

ಕೊಲೆಯಾದ ಕೋಳಿ ಸುರೇಶ ಮೈಸೂರಿನಲ್ಲಿ ಆಟೋ ಓಡಿಸುತ್ತಿದ್ದ, ಮತ್ತೋರ್ವ ನಾಗರಾಜು  ಜೆಸಿಬಿ ಯಂತ್ರ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದ,ಕಳೆದ ರಾತ್ರಿ  ಗ್ರಾಮದ  ದೇವಸ್ಥಾನದದ ಟೀ ಅಂಗಡಿ ಬಳಿ ಜಗಳ ನಡೆದು ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ
ವರದಿ: ನಾಗಯ್ಯ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT