ವಾರಿಸ್ ಪಠಾಣ್ 
ರಾಜ್ಯ

ವಿವಾದಾತ್ಮಕ '15 ಕೋಟಿ ಮುಸ್ಲಿಮರು ಹೇಳಿಕೆ': ಕಲಬುರಗಿಯಲ್ಲಿ ವಾರಿಸ್ ಪಠಾಣ್ ವಿರುದ್ಧ ಎಫ್ಐಆರ್ ದಾಖಲು

ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕಲಬುರಗಿ: ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕಲಬುರಗಿ ಪೊಲೀಸರು ಪಠಾಣ್ ವಿರುದ್ಧ ಐಪಿಸಿ ಸೆಕ್ಸೆನ್ 117, 150(ದಂಗೆಗೆ ಪ್ರಚೋದನೆ ನೀಡುವುದು) ಮತ್ತು 153ಎ ಅಡಿ ಕೇಸ್ ದಾಖಲಿಸಿದ್ದಾರೆ.

ಕಳೆದ ಫೆಬ್ರವರಿ 16ರಂದು ಕಲಬುರಗಿಯಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಮಾತನಾಡಿದ್ದ ಪಠಾಣ್, ನಾವು ಎಲ್ಲರೂ ಒಟ್ಟಿಗೆ ಹೋಗಬೇಕು. ನಮಗೂ ಸ್ವಾತಂತ್ರ್ಯ ಬೇಕು. ಆದರೆ ಇದನ್ನು ಕೇಳಿ ಪಡೆಯಲು ಸಾಧ್ಯವಿಲ್ಲ. ಇವುಗಳನ್ನು ನಾವು ಬಲವಂತದಿಂದ ಪಡೆಯುವ ಸ್ಥಿತಿ ಬಂದಿದೆ. ನೆನಪಿಡಿ, ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದರು.

ಇನ್ನು ಪಠಾಣ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಬಿಜೆಪಿ ಮತ್ತು ಶಿವಸೇನೆ, ಎಐಎಂಐಎಂ ಮುಖಂಡನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Strait of Hormuz ನಲ್ಲಿ ನೌಕಾಪಡೆ ನಿಯೋಜನೆ ಕುರಿತು ಅಮೆರಿಕ ಜತೆ ದ್ವಿಪಕ್ಷೀಯ ಮಾತುಕತೆ ಇಲ್ಲ': ಭಾರತ

Video: ಭಾರತಕ್ಕೆ ಬಿಗ್‌ ರಿಲೀಫ್‌; ಹಾರ್ಮುಜ್ ಜಲಸಂಧಿ ಮೂಲಕ ಗುಜರಾತ್ ತಲುಪಿದ LPG ಹೊತ್ತ ಶಿವಾಲಿಕ್ ನೌಕೆ!

ಮತ್ತೆ ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ: ದೀದಿಯನ್ನು ಒಂದೇ ಕ್ಷೇತ್ರಕ್ಕೆ ಕಟ್ಟಿಹಾಕಲು ಬಿಜೆಪಿ ರಣತಂತ್ರ!

ಹಾರ್ಮುಜ್ ಜಲಸಂಧಿಗೆ ಇರಾನ್ ನಿರ್ಬಂಧ: ಜಗತ್ತಿಗೆ ಸುಗಮ ತೈಲ ಸಾಗಣೆಗೆ ಇರುವ ಪರ್ಯಾಯ ಆಯ್ಕೆಗಳ್ಯಾವುವು? ಇಲ್ಲಿದೆ ಮಾಹಿತಿ

Video: 'ಶ್ರೀಲೀಲಾ ಫೋನ್ ಕೊಟ್ಟಿದ್ರು.. ಹಿಡ್ಕೊಂಡಿದ್ದೆ ಅಷ್ಟೇ.. ಅಲ್ಲೇನೂ ಆಗಿಲ್ಲ.. ನಾನೇನೂ ಮಾಡಿಲ್ಲ..': ನಟನ ಸ್ಪಷ್ಟನೆ

SCROLL FOR NEXT