ಅಮೂಲ್ಯ 
ರಾಜ್ಯ

ಅಮೂಲ್ಯ ಪ್ರಕರಣದ ಮೂಲಕ ಸಿಎಎ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲೂ ಬಿಜೆಪಿ ಯತ್ನ: ವಿಪಕ್ಷಗಳು

ಅಮೂಲ್ಯ ವಿರುದ್ಧದ ದೇಶದ್ರೋಹ ಪ್ರಕರಣದ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. 

ಬೆಂಗಳೂರು: ಅಮೂಲ್ಯ ವಿರುದ್ಧದ ದೇಶದ್ರೋಹ ಪ್ರಕರಣದ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. 

ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದ್ದ ಅಮೂಲ್ಯ ವಿರುದ್ಧ ಬಿಜೆಪಿ ನಾಯಕರು ತೀವ್ರವಾಗಿ ಕಿಡಿಕಾರಲು ಆರಂಭಿಸಿದ್ದಾರೆ. ಇದರಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರೂ ಕೂಡ ಕಿಡಿಕಾರಿದ್ದು, ಈ ನಡುವೆ ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ. 

ಪೌರತ್ವ ಕಾಯ್ದೆ ವಿರುದ್ಧ ಜನರ ಆಕ್ರೋಶವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. 

ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಮಾತನಾಡಿ, ದೇಶದ ವಿರುದ್ಧ ಯುವತಿ ಘೋಷಣೆ ಕೂಗಿರುವುದು ನಿಜಕ್ಕೂ ದೂರಾದೃಷ್ಟಕರ ವಿಚಾರ. ಆದರೆ, ಸರ್ಕಾರ ಈ ವಿರುದ್ಧ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದೇ ಹೋದಲ್ಲಿ ಮತ್ತಷ್ಟು ಜನರು ಇಂತಹ ಪ್ರವೃತ್ತಿಯನ್ನು ಬೆಳೆಸಿಕೊಳ್ಳುತ್ತಾರೆ. ಇಂದಿನ ಯುವ ಪೀಳಿಗೆಯಲ್ಲಿ ದೇಶಪ್ರೇಮ ಬೆಳೆಯಬೇಕು ಎಂದು ಹೇಳಿದ್ದಾರೆ. 

ಸಿಎಎ ವಿರುದ್ಧದ ಪ್ರತಿಭಟನೆ ಪಕ್ಷಗಳು, ಧರ್ಮ, ಜಾತಿಯನ್ನು ವಿಭಾಗಿಸುತ್ತಿದೆ. ಪ್ರತೀ ಸಮುದಾಯ ಹಾಗೂ ಸಮಾಜದ ಜನರು ಬೀದಿಗಿಳಿದು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಇಂತಹ ಪ್ರತಿಭಟನೆಗಳ ಕುರಿತ ಜನರ ಬೇರೆಡೆಗೆ ಸೆಳೆಯುವ ಯತ್ನಗಳು ನಡೆಯಬಾರದು ಎಂದು ಮತ್ತೊಬ್ಬ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. 

ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಸೂಕ್ತ ಸಂಸ್ಥೆಗೆ ತನಿಖೆ ವಹಿಸಿ ಸರ್ಕಾರ ಕ್ರಮ ಕೈಗೊಳ್ಲಬೇಕು. ಪ್ರತೀಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ. ಆದರೆ, ಅದನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದಾರೆ. 

ಜೆಡಿಎಸ್ ಹಿರಿಯ ನಾಯಕ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಇದಲ್ಲದೆ, ಸಾಕಷ್ಟು ವಿಚಾರಗಳತ್ತ ಗಮನ ಹರಿಸುವ ಅಗತ್ಯವಿದೆ. ಮಂಗಳೂರು ಗೋಲಿಬಾರ್, ಬೀದರ್ ದೇಶದ್ರೋಹ ಪ್ರಕರಗಳಿವೆ. ಅಮೂಲ್ಯ ಮತ್ತು ಆರ್ದ್ಯಾ ಪ್ರಕರಣಗಳು ಕೇವಲ ಗಮನ ಬೇರೆಡೆ ಸೆಳೆಯುವ ಯತ್ನಗಳಷ್ಟೇ ಎಂದಿದ್ದಾರೆ. ಇನ್ನು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಕುಮಾರಸ್ವಾಮಿಯವರು ಪ್ರಕರಣಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT