ಡಾ.ರೇವಂತ್, ಕವಿತಾ ದಂಪತಿ ಮತ್ತು ಹರ್ಷಿತಾ(ಸಂಗ್ರಹ ಚಿತ್ರ) 
ರಾಜ್ಯ

ಅಕ್ರಮ ಸಂಬಂಧ, ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ; ವಿಷಯ ತಿಳಿದು ಪ್ರಿಯತಮೆ ನೇಣಿಗೆ ಶರಣು 

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಕಳೆದ 17ರಂದು ಗೃಹಿಣಿ ಕವಿತ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ.ತಮ್ಮ ತಪ್ಪಿಗೆ ಮೂರು ಜೀವಗಳು ಬಲಿಯಾದರೆ ಇತ್ತ ಅವರ ಮೂರು ಪುಟ್ಟ ಕಂದಮ್ಮಗಳು ಅನಾಥವಾಗಿದ್ದಾರೆ.  

ಚಿಕ್ಕಮಗಳೂರು/ಬೆಂಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಕಳೆದ 17ರಂದು ಗೃಹಿಣಿ ಕವಿತ ಎಂಬಾಕೆಯ ಬರ್ಬರ ಕೊಲೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದೆ.ತಮ್ಮ ತಪ್ಪಿಗೆ ಮೂರು ಜೀವಗಳು ಬಲಿಯಾದರೆ ಇತ್ತ ಅವರ ಮೂರು ಪುಟ್ಟ ಕಂದಮ್ಮಗಳು ಅನಾಥವಾಗಿದ್ದಾರೆ.  


ಕಳೆದ ಫೆಬ್ರವರಿ 17ರಂದು ಕವಿತಾಳ ಕೊಲೆ ನಡೆದ ನಂತರ ಆಕೆಯ ಪತಿ ದಂತವೈದ್ಯ ಡಾ ರೇವಂತ್ ಪೊಲೀಸರಿಗೆ ದೂರು ನೀಡಿ ದರೋಡೆಕೋರರು ನನ್ನ ಪತ್ನಿಯನ್ನು ಕೊಂದು ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ನಾಟಕವಾಡಿದ್ದ. ಪೊಲೀಸರು ರೇವಂತ್ ಮನೆಗೆ ಬಂದು ತನಿಖೆ ನಡೆಸಿದಾಗ ಡಾ ರೇವಂತ್ ಮೇಲೆಯೇ ಅವರಿಗೆ ಸಂಶಯಬಂತು. ಕೊನೆಗೆ ಅದು ದೃಢವಾಗಿ ಪೊಲೀಸರಿಗೆ ಸತ್ಯ ಗೊತ್ತಾಗುತ್ತಿದ್ದಂತೆ ಭೀತಿಯಿಂದ ನಿನ್ನೆ ರೇವಂತ್ ಮನೆ ಹತ್ತಿರ ಚಲಿಸುತ್ತಿದ್ದ ರೈಲಿಗೆ ತಲೆಯೊಡ್ಡಿ ಪ್ರಾಣ ಕಳೆದುಕೊಂಡಿದ್ದಾನೆ.


ಏನು ಕಾರಣ: ಪತ್ನಿಯ ಕೊಲೆ, ಪತಿಯ ಆತ್ಮಹತ್ಯೆಯ ಜಾಡು ಹಿಡಿದು ಹೊರಟಾಗ ಪೊಲೀಸರಿಗೆ ಸಿಕ್ಕಿದ್ದು ಡಾ.ರೇವಂತ್ ಗೆ ಇದ್ದ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ. ಹಿಂದೆ ಕಡೂರಿನಲ್ಲಿಯೇ ನೆಲೆಸಿದ್ದ ನಂತರ ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ವಲಸೆ ಹೋಗಿ ಅಲ್ಲಿ ನೆಲೆಸಿದ್ದ ಹರ್ಷಿತಾ ಜೊತೆಗೆ ಡಾ ರೇವಂತ್ ಗೆ ಅಕ್ರಮ ಸಂಬಂಧವಿತ್ತು. ಹರ್ಷಿತಾಗೆ ಮದುವೆಯಾಗಿದ್ದು ಪತಿ ಬಿಎಂಟಿಸಿ ಚಾಲಕ ಮತ್ತು ಅವರಿಗೆ ಒಬ್ಬ ಮಗಳಿದ್ದಾಳೆ. ಪತಿಯ ಅಕ್ರಮ ಸಂಬಂಧ ಬಗ್ಗೆ ಕವಿತಾ ಆಗಾಗ ಆಕ್ಷೇಪವೆತ್ತುತ್ತರಿಂದ ಪತಿ-ಪತ್ನಿ ಮಧ್ಯೆ ಜಗಳ ನಡೆಯುತ್ತಿತ್ತು. ತನ್ನ ನಡೆಗೆ ಪತ್ನಿಯಿಂದ ತೀವ್ರ ಆಕ್ಷೇಪವುಂಟಾದಾಗ ಆಕೆಯನ್ನು 6 ತಿಂಗಳ ಮಗುವಿನ ಮುಂದೆಯೇ ಕ್ರೂರವಾಗಿ ಹತ್ಯೆ ಮಾಡಿದ್ದ. 

ಡಾ ರೇವಂತ್ ದಂಪತಿಗೆ 5 ವರ್ಷದ ಹಾಗೂ 6 ತಿಂಗಳ ಇಬ್ಬರು ಗಂಡು ಮಕ್ಕಳಿದ್ದಾರೆ. ಇತ್ತ ರೇವಂತ್ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮಹಿಳೆ ಹರ್ಷಿತಾ ಕೂಡ ತನ್ನ ಮನೆಯಲ್ಲಿ ಕಳೆದ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇಂದು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ತುಮಕೂರಿನ ಆಕೆಯ ಪೋಷಕರಿಗೆ ಮೃತದೇಹ ಹಸ್ತಾಂತರ ಮಾಡಿದರು.


ಆತ್ಮಹತ್ಯೆಗೆ ಮುಂಚೆ ಹರ್ಷಿತಾ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಪತಿ ಸುದೀಂಧ್ರ ಮದ್ಯ ಸೇವಿಸಿ ಬಂದು ಪ್ರತಿನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು, ತನಗೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನಮೂದಿಸಿದ್ದಾಳೆ. ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ಕೊನೆಗೂ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಲಖನೌ, ಕಣ್ಣೀರು ಹಾಕಿದ ಸಂಜೀವ್ ಗೋಯೆಂಕಾ, Video!

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ

IPL ಅನ್ನೂ ಮೀರಿಸಿ PSL 'ವಿಶ್ವದ ನಂಬರ್ ಒನ್ ಲೀಗ್' ಆಗುತ್ತದೆ: Mohsin Naqvi

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

SCROLL FOR NEXT