ಪ್ರತ್ಯಕ್ಷ ದೃಶ್ಯ 
ರಾಜ್ಯ

ಹೊಸಪೇಟೆ: ಕಾಲುವೆಗೆ ಕಾರು ಉರುಳಿ ಮಂಗಳಮುಖಿ ಸಾವು, ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು ಮಂಗಳ ಮುಖಿ ಸಾವನ್ನಪ್ಪಿದ್ದು ಓರ್ವ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಹೊಸಪೇಟೆ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು ಮಂಗಳ ಮುಖಿ ಸಾವನ್ನಪ್ಪಿದ್ದು ಓರ್ವ ಪ್ರಾಣಪಾಯದಿಂದ ಪಾರಾಗಿದ್ದಾನೆ.

ಹೊಸಪೇಟೆಯ ರೈಲ್ವೆ ಸ್ಟೇಷನ್ ಸಮೀಪ ಎಲ್ ಎಲ್ ಸಿ ಕಾಲುವೆಗೆ ನಿನ್ನೆ ತಡ  ರಾತ್ರಿ ಕಾರು ಉರುಳಿಬಿದ್ದಿದೆ. ಕಾರಿನಲ್ಲಿ ಮುಖೇಶ್ ಮತ್ತು ಪಿ.ಕೆ ಹಳ್ಳಿಯ ನಿವಾಸಿ 35 ವರ್ಷದ ಮಂಗಳ ಮುಖಿ ಅನಿತ ಪ್ರಯಾಣಿಸುತ್ತಿದ್ದರು.

ಮುಖೇಶ್ ಕಾರಿನ ಗಾಜು ಹೊಡಿದು ಹೊರ ಬಂದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗೃಹರಕ್ಷಕ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರು ಹೊರಕ್ಕೆ ತೆಗೆದಿದ್ದಾರೆ.

ಆಯತಪ್ಪಿ ಕೆಳಗೆ ಬಿದ್ದು ಬೈಕ್ ಸವಾರ ಸಾವು
ಆಯ ತಪ್ಪಿ ಕೆಳಗೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದ ಬಳಿ ನಡೆದಿದೆ. 

ಮೃತ ವ್ಯಕ್ತಿ ಸೀತಾರಾಮ್ ತಾಂಡದ ನಿವಾಸಿ 35 ವರ್ಷದ ಹರೀಶ್ ಎಲ್.ಎಸ್ ಎಂದು ಗುರುತಿಸಲಾಗಿದೆ. ಗಂಗಾವತಿಯಿಂದ ಕೆಲಸ ಮುಗಿಸಿ ಸೀತಾರಾಮ್ ತಾಂಡಕ್ಕೆ ಮರಳುವ ವೇಳೆ ದುರ್ಘಟನೆ ಸಂಭವಿಸಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT