ಸಂಗ್ರಹ ಚಿತ್ರ 
ರಾಜ್ಯ

ಹುಡುಗಿ ಚುಡಾಯಿಸಿದ್ದ ಆರೋಪ: ಹಾಸ್ಟೆಲ್ ನುಗ್ಗಿ ದಾಂದಲೆ ನಡೆಸಿದ ಯುವಕರ ಗುಂಪು

ಯುವತಿಯೊಬ್ಬಳನ್ನು ಚುಡಾಸಿದ ಕಾರಣಕ್ಕೆ ಯುವಕರ ಗುಂಪೊಂದು ಹಾಸ್ಟೆಲ್'ಗೆ ನುಗ್ಗಿ ದಾಂದಲೆ ನಡೆಸಿ ವಸತಿ ನಿಲಯದ ಕಿಟಕಿ ಗಾಜುಗಳನ್ನೆಲ್ಲಾ ಪುಡಿ ಪುಡಿ ಮಾಡಿರುವ ಘಟನೆ ಸಂಗಮೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ. 

ಬೆಳಗಾವಿ: ಯುವತಿಯೊಬ್ಬಳನ್ನು ಚುಡಾಸಿದ ಕಾರಣಕ್ಕೆ ಯುವಕರ ಗುಂಪೊಂದು ಹಾಸ್ಟೆಲ್'ಗೆ ನುಗ್ಗಿ ದಾಂದಲೆ ನಡೆಸಿ ವಸತಿ ನಿಲಯದ ಕಿಟಕಿ ಗಾಜುಗಳನ್ನೆಲ್ಲಾ ಪುಡಿ ಪುಡಿ ಮಾಡಿರುವ ಘಟನೆ ಸಂಗಮೇಶ್ವರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ನಡೆದಿದೆ. 

ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 8-10 ಯುವಕರ ತಂಡ ಹಾಸ್ಟೆಲ್ ನಲ್ಲಿ ದಾಂಧಲೆ ನಡೆಸಿರುವುದು ಕಂಡು ಬಂದಿದೆ. 

ಹಾಸ್ಟೆಲ್'ಗೆ ನುಗ್ಗಿರುವ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ವೇಳೆ ವಿದ್ಯಾರ್ಥಿಗಳು ದಾಳಿಯ ಹಿಂದಿನ ಕಾರಣ ತಿಳಿದಿಲ್ಲ ಎಂದು ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ. 

ಆದರೆ, ಮೂಲಗಳ ಪ್ರಕಾರ ಹಾಸ್ಟೆಲ್'ನ ಕೆಲ ವಿದ್ಯಾರ್ಥಿಗಲು ಯುವತಿಯೊಬ್ಬಳನ್ನು ಚುಡಾಯಿಸಿದ್ದು, ಇದರಿಂದ ಕೆಂಡಾಮಂಡಲಗೊಂಡಿರುವ ಸ್ಥಳೀಯ ಯುವಕರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಇದಾವುದಕ್ಕೂ ಕಿವಿಗೊಡದ ಹಾಸ್ಟೆಲ್ ವಿದ್ಯಾರ್ಥಿಗಳು ಮತ್ತೆ ಮತ್ತ ಚಾಳಿಯನ್ನು ಮುಂದುವರೆಸಿದ್ದಾರೆ. ಇದರಿಂದ ಆಕ್ರೋಶಗೊಂಡು ಯುವಕರ ಗುಂಪು ಹಾಸ್ಟೆಲ್ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT