ಸಂಗ್ರಹ ಚಿತ್ರ 
ರಾಜ್ಯ

ಪ್ರಯಾಣಿಕರಿಗೆ ಶಾಕ್! ಬಸ್ ಪ್ರಯಾಣ ದರ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಜಾರಿ

ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣದರ ಏರಿಕೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಸರ್ಕಾರಿ ಸಾರಿಗೆ ಬಸ್ ದರದಲ್ಲಿ ಶೇ.12ರಷ್ಟು ಹೆಚ್ಚಳ ಮಾಡಿ ಆದೇಶ ಜಾರಿ ಮಾಡಲಾಗಿದ್ದು ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಅನ್ವಯಿಸಲಿದೆ.

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣದರ ಏರಿಕೆ ಮಾಡಿ ಸರ್ಕಾರ ಆದೇಶ ಪ್ರಕಟಿಸಿದೆ. ಸರ್ಕಾರಿ ಸಾರಿಗೆ ಬಸ್ ದರದಲ್ಲಿ ಶೇ.12ರಷ್ಟು ಹೆಚ್ಚಳ ಮಾಡಿ ಆದೇಶ ಜಾರಿ ಮಾಡಲಾಗಿದ್ದು ದರ ಹೆಚ್ಚಳ ಇಂದು ಮಧ್ಯರಾತ್ರಿಯಿಂದಲೇ ಅನ್ವಯಿಸಲಿದೆ.

ದರ ಹೆಚ್ಚಳ ಸಂಬಂಧ ಸಲ್ಲಿಕೆಯಾಗಿದ್ದ ಪ್ರಸ್ತಾವನೆ ಪರಿಶೀಲಿಸಿ  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು  ಶೇ. 12ರಷ್ಟು ಬಸ್ ಪ್ರಯಾಣ ದರ ಏರಿಕೆ ಮಾಡಲು ಸರ್ಕಾರ ಅನುಮೋದಿಸಿದೆ.

ಬಸ್ ದರ ಏರಿಕೆ ಸಂಬಂಧ ಸಾರಿಗೆ ಇಲಾಖೆಯ ಆಧೀನ ಕಾರ್ಯದರ್ಶಿ ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಎಲ್ಲೆಲ್ಲಿ ಎಷ್ಟು ದರ ಏರಿಕೆ?

ಸರ್ಕಾರ ಬಸ್ ಪ್ರಯಾಣದರವನ್ನು ಶೇ.12ರಷ್ಟು ಹೆಚ್ಚಳ ಮಾಡಿದೆ. ಈ ಪ್ರಕಾರ 100 ರು. ಟಿಕೆಟಿನ ಬೆಲೆ 12 ರು. ಏರಿಕೆಯಾಗಿ 112 ರು. ಆಗಲಿದೆ. ಅದರಂತೆ ೨೦೦ ರು. ಗೆ ೨೨೪, 300 ರು. ಗೆ 336 , 500  ರು. ಗೆ 560 1000  ರು. ಗೆ 1120 ರು. ನೀಡಬೇಕಾಗುವುದು.

ಈ ದರ ಏರಿಕೆಯು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಂಸ್ಥೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಅನ್ವಯಿಸಲಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದರ ಏರಿಕೆಯಿಂದ ಹೊರಗುಳಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT