ಯಡಿಯೂರಪ್ಪ 
ರಾಜ್ಯ

2023ಕ್ಕೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ

ನಮ್ಮ ಸರ್ಕಾರ ಸುಭದ್ರವಾಗಿದ್ದು, ಈ ಅವಧಿಯನ್ನು ಸಂಪೂರ್ಣಗೊಳಿಸುವುದಲ್ಲದೇ 2023ರಲ್ಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ಕಲಬುರಗಿ: ನಮ್ಮ ಸರ್ಕಾರ ಸುಭದ್ರವಾಗಿದ್ದು, ಈ ಅವಧಿಯನ್ನು ಸಂಪೂರ್ಣಗೊಳಿಸುವುದಲ್ಲದೇ 2023ರಲ್ಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ಕಲಬುರಗಿ ಪ್ರವಾಸ ಕೈಗೊಂಡಿರುವ ಡಾ. ಅಶ್ವತ್ಥನಾರಾಯಣ ಸುದ್ದಿಗಾರರ ಜತೆ ಮಾತನಾಡಿದ ಅವರು, 32 ಶಾಸಕರು ಬಿಜೆಪಿಗೆ ರಾಜೀನಾಮೆ ಕೊಡುತ್ತಾರೆ ಎಂಬ ಕಾಂಗ್ರೆಸ್ ನಾಯಕ ಸಿ. ಎಂ. ಇಬ್ರಾಹಿಂ ಅವರ ಹೇಳಿಕೆ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

"ಅವರು ಯಾವ 32 ಜನರ ಬಗ್ಗೆ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರ ಪಕ್ಷದ 32 ಮಂದಿ ಆಚೆ ಬರುತ್ತಾರೋ ಏನೋ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ಯಾವ ಸಮಸ್ಯೆಯೂ ಇಲ್ಲ,"ಎಂದರು.

ಸದ್ಯ ಜೆಡಿಎಸ್‌-ಕಾಂಗ್ರೆಸ್‌ ನಡುವೆ ಹೊಂದಾಣಿಕೆ ಇಲ್ಲ.  ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ  ನಮ್ಮ ಸರ್ಕಾರವನ್ನು ಬೆಂಬಲಿಸಿದ್ದಾರೆ.  ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವುದು ಖಚಿತ ಎಂದರು.

"ಎನ್‌ ಕೆ ಸಿಂಗ್‌ ನೇತೃತ್ವ 15ನೇ ಹಣಕಾಸು ಆಯೋಗ ತನ್ನದೇ ಆದ ಮಾನದಂಡ ಅಳವಡಿಸಿಕೊಂಡಿದೆ.  ಅನುದಾನ ಹಂಚಿಕೆಯಲ್ಲಿ ಕೊಂಚ ಏರುಪೇರಾಗಿದೆ. ಈ ಸಂಬಂಧ  ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿಗಳು ಮಾತುಕತೆ ನಡೆಸಿದ್ದಾರೆ. ರಾಜ್ಯಕ್ಕೆ ಆಗುತ್ತಿರುವ ತೊಂದರೆಯನ್ನು ಮನವರಿಕೆ ಮಾಡಿಕೊಡುವರು. ಕೇಂದ್ರದಿಂದ ರಾಜ್ಯಕ್ಕೆ ಯಾವ ಅನ್ಯಾಯವೂ ಆಗದು ಎಂದು ಅವರು ಹೇಳಿದರು.     

"ಅಮೆರಿಕ ಅಂದರೆ ದೊಡ್ಡಣ ಎನ್ನುವ ಕಾಲ ಇತ್ತು. ಈಗ ಭಾರತವೂ ಸದೃಢವಾಗಿ ಬೆಳೆದು,  ಆ ದೇಶದ ಜತೆ ವ್ಯವಹಾರ ಮಾಡುವ ಮಟ್ಟಕ್ಕೆ ಬೆಳೆದಿದೆ.  ಭಾರತೀಯರು ಅಭಿಮಾನ ಪಡುವ ರೀತಿ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಹೋದಾಗಲೂ ಅಪಾರ ಗೌರವ, ಮನ್ನಣೆ ನೀಡಿದ್ದರು. 

ಟ್ರಂಪ್‌ ಭೇಟಿಯಿಂದ ಉಭಯ ದೇಶಗಳ ನಡುವಿನ ಸ್ನೇಹ ಬಾಂಧವ್ಯ ಹೆಚ್ಚುವುದು, ಇದರಿಂದ ಅಮೆರಿಕಕ್ಕೆ ವಲಸೆ ಹೋಗುವ ನಮ್ಮ ಯುವಜನರಿಗೆ ವಿಫಲ ಅವಕಾಶಗಳು ತೆರೆದುಕೊಳ್ಳುವುದು ಎಂದು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಬಂಗಾಳ ಉಪಚುನಾವಣೆ: ನಂದಿಗ್ರಾಮದಲ್ಲಿ ಹತ್ಯೆಗೀಡಾದ ಸಿಎಂ ಆಪ್ತ ಸಹಾಯಕನ ತಾಯಿ ಕಣಕ್ಕೆ!

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಮಹಿಳಾ ಬೈಕರ್‌ಗೆ ಡಿಕ್ಕಿ ಪ್ರಕರಣ: ಘಟನೆ ನಡೆದ ಎರಡು ದಿನಗಳ ನಂತರ ಕೊನೆಗೂ ಆರೋಪಿ ಕಾರು ಚಾಲಕ ಅಂದರ್!

‘ವಂದೇ ಮಾತರಂ’ ಮೊದಲ ಎರಡು ಚರಣಗಳಿಗೆ ಸೀಮಿತ: ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು