ರವಿ ಪೂಜಾರಿ 
ರಾಜ್ಯ

ಇಲ್ಲಿ ಕ್ರಿಮಿನಲ್, ಅಲ್ಲಿ ಸಮಾಜ ಸೇವಕ: ಸೆಲೆಗಲ್'ನಲ್ಲಿ ಸಮಾಜ ಸೇವೆ ಮಾಡಿ ಜನಮನ್ನಣೆ ಗಳಿಸಿದ್ದ ಭೂಗತ ಪಾತಕಿ ರವಿ ಪೂಜಾರಿ

ಭಾರತದ ಮಟ್ಟಿಗೆ ಭೂಗತ ಪಾತಕಿ, ಗ್ಯಾಂಗ್ ಸ್ಟರ್ ಆಗಿರುವ ರವಿ ಪೂಜಾರಿ ಸೆನಗಲ್ ನಲ್ಲಿ ಗಣ್ಯ ವ್ಯಕ್ತಿಯಾಗಿದ್ದ ರವಿ ಪೂಜಾರಿ ಸ್ಥಳೀಯವಾಗಿ ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿಲ್ಲ. ರೈತರು, ಬಡ ಜನರಿಗೆ ಪಂಪ್ ಸೆಟ್ ಹಾಕಿಸಿಕೊಡುತ್ತಿದ್ದ. ಈ ಎಲ್ಲಾ ಕಾರ್ಯಗಳನ್ನೂ ಬೇರೆಯವರ ಪ್ರಾಯೋಜಕತ್ವದಲ್ಲಿಯೇ ಮಾಡಿಸಿ ಜನಮನ್ನಣೆ ಗಳಿಸಿದ್ದ...

ಬೆಂಗಳೂರು: ಭಾರತದ ಮಟ್ಟಿಗೆ ಭೂಗತ ಪಾತಕಿ, ಗ್ಯಾಂಗ್ ಸ್ಟರ್ ಆಗಿರುವ ರವಿ ಪೂಜಾರಿ ಸೆನಗಲ್ ನಲ್ಲಿ ಗಣ್ಯ ವ್ಯಕ್ತಿಯಾಗಿದ್ದ ರವಿ ಪೂಜಾರಿ ಸ್ಥಳೀಯವಾಗಿ ಸಾಕಷ್ಟು ಸಾಮಾಜಿಕ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿಲ್ಲ. ರೈತರು, ಬಡ ಜನರಿಗೆ ಪಂಪ್ ಸೆಟ್ ಹಾಕಿಸಿಕೊಡುತ್ತಿದ್ದ. ಈ ಎಲ್ಲಾ ಕಾರ್ಯಗಳನ್ನೂ ಬೇರೆಯವರ ಪ್ರಾಯೋಜಕತ್ವದಲ್ಲಿಯೇ ಮಾಡಿಸಿ ಜನಮನ್ನಣೆ ಗಳಿಸಿದ್ದ. ಹೀಗಾಗಿ ಆರೋಪಿ ಆ ಸ್ಥಳದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಬೆಳೆದಿದ್ದ. 

ಆತನ ಬಗ್ಗೆ ಅಲ್ಲಿ ವಿಚಾರಿಸಿದರೆ, ಪ್ರತಿಯೊಬ್ಬರಿಂದಲೂ ಉತ್ತಮ ಪ್ರತಿಕ್ರಿಯೆಗಳೇ ವ್ಯಕ್ತವಾಗುತ್ತಿದ್ದವು. ಸಮಾಜಸೇವೆಗೇನು ಆತ ತನ್ನ ಕೈಯಿಂದ ಹಣ ಪಾವತಿಸುತ್ತಿರಲಿಲ್ಲ. ಬದಲಿಗೆ ಪ್ರಾಯೋಜಕರನ್ನು ಹಿಡಿದು ಕೆಲಸ ಮಾಡಿಸಿಕೊಡುತ್ತಿದ್ದ. 

ಸೆನೆಗಲ್, ಐವರಿ ಕೋಸ್ಟ್ ಮತ್ತು ಬುರ್ಕಿನಾ ಫಾಸೋದಲ್ಲಿ ಆರೋಪಿ ಉತ್ತರ ಭಾರತೀಯರ ಪಾಲುದಾರಿಕೆಯಲ್ಲಿ ಹೋಟೆಲ್ ಉದ್ಯಮ, ಟೆಕ್ಸ್ ಟೈಲ್ ಹಾಗೂ ವಿದ್ಯುತ್ ಉಪಕರಣ ಮಾರಾಟ ಮಾಡುವ ಉದ್ಯಮ ಹೊಂದಿದ್ದ. ಈ ಉದ್ಯಮಗಳಲ್ಲಿ ಒಳ್ಳೆಯ ಆದಾಯ ಪಡೆಯುತ್ತಿದ್ದ. ಪಾಲುದಾರಿಕೆಯಲ್ಲಿ ಮಹಾರಾಜ ಎಂಬ ಭಾರತೀಯ ರೆಸ್ಟೋರೆಂಟ್ ನಡೆಸುತ್ತಿದ್ದ. 

ಈ ರೆಸ್ಟೋರೆಂಟ್'ಗ ಆ ಪ್ರದೇಶದಲ್ಲಿ ಉತ್ತಮ ಸ್ಪಂದನೆ ಇದೆ. ಉತ್ತಮ ಶುಚಿ-ರುಚಿಯ, ಗುಣಮಟ್ಟದ ಆಹಾರ ನೀಡುತ್ತಾರೆಂದು ಅಲ್ಲಿನ ನಾಗರೀಕರು ಹೇಳುತ್ತಾರೆ. 

ಮೊದಲಿಗೆ ಈತನ ಬಗ್ಗೆ ಅಲ್ಲಿನ ನಾಗರೀಕರಲ್ಲಿ ಒಳ್ಳೆಯ ಅಭಿಪ್ರಾಯವಿತ್ತು. ಆದರೆ, ಈತನ ಬಂಧನಕ್ಕೆ ಯಾರೂ ಕೂಡ ಅಡ್ಡಿಪಡಿಸಲಿಲ್ಲ. ಬಂಧನಗ ಬಳಿಕ ಆರೋಪಿಯ ಅಸಲಿಯತ್ತು ಎಲ್ಲರಿಗೂ ತಿಳಿಯಿತು ಎಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ವಿವರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT