ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಹಳೇ ವೈಷಮ್ಯ ಹಿನ್ನಲೆ ಚಾಕುವಿನಿಂದ ಇರಿದು ಎಳನೀರು ವ್ಯಾಪಾರಿ ಹತ್ಯೆ

ಹಳೇ ವೈಷಮ್ಯದ ಹಿನ್ನಲೆಯಲ್ಲಿ ಎಳನೀರು ವ್ಯಾಪಾರಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮದ್ದೂರು ತಾಲ್ಲೂಕಿನ ದೊಡ್ಡ ಅರಸಿನಕೆರೆ ಗ್ರಾಮದಲ್ಲಿ ಕಳೆದ ಸೋಮವಾರ ರಾತ್ರಿ ನಡೆದಿದೆ.

ಮಂಡ್ಯ: ಹಳೇ ವೈಷಮ್ಯದ ಹಿನ್ನಲೆಯಲ್ಲಿ ಎಳನೀರು ವ್ಯಾಪಾರಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮದ್ದೂರು ತಾಲ್ಲೂಕಿನ ದೊಡ್ಡ ಅರಸಿನಕೆರೆ ಗ್ರಾಮದಲ್ಲಿ ಕಳೆದ ಸೋಮವಾರ ರಾತ್ರಿ ನಡೆದಿದೆ.

ಚಿಕ್ಕಮರಿಗೌಡನ ದೊಡ್ಡಿ ಗ್ರಾಮದ  ಶಿವು(21) ಎಂಬಾತನೇ  ಮೃತಪಟ್ಟಿರುವ  ಎಳನೀರು ವ್ಯಪಾರಿಯಾಗಿದ್ದು, ದೊಡ್ಡರಸಿನಕೆರೆ ಗ್ರಾಮದ  ಶ್ರೀಧರ್ ನಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಘಟನೆ ಹಿನ್ನೆಲೆ: ಎಳನೀರು ವ್ಯಾಪಾರಿಯಾಗಿದ್ದ ಶಿವು ಕೆಲಸ ಮುಗಿಸಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ದೊಡ್ಡರಸಿನಕೆರೆಯ ಬಳಿ ಚಾಕುವಿನಿಂದ ಇರಿದು ಶ್ರೀಧರ್ ಪರಾರಿಯಾಗಿದ್ದಾನೆ, ಚಾಕು ಇರಿತದಿಂದ ತೀವ್ರ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದ ಶಿವು ಅವರನ್ನು ಸಮೀಪದ ಭಾರತೀನಗರ ಜಿ,ಮಾದೇಗೌಡ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮೊನ್ನೆ(ಭಾನುವಾರ) ಆತ್ಮಲಿಂಗೇಶ್ವರ ಜಾತ್ರೆಯಲ್ಲಿಯೂ ಸಹ ಕ್ಷುಲ್ಲಕ ಕಾರಣಕ್ಕೆ  ಶ್ರೀಧರ್ ಮತ್ತು ಶಿವು ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸೇಡಿಗಾಗಿ ಇಂದು(ಸೋಮವಾರ) ರಾತ್ರಿ ಆರೋಪಿ ಶ್ರೀಧರ್ ದೊಡ್ಡರಸಿನಕೆರೆಯ ಮಾರ್ಗಮಧ್ಯೆ ಶಿವನೊಂದಿಗೆ ಜಗಳ ತೆಗೆದು ಚಾಕುವಿನಿಂದ  ಇರಿದಿದ್ದಾನೆ  ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT