ಸಿಎಂ ಯಡಿಯೂರಪ್ಪ 
ರಾಜ್ಯ

78ನೇ ವಸಂತಕ್ಕೆ ಕಾಲಿಟ್ಟ ಸಿಎಂ ಯಡಿಯೂರಪ್ಪ: ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮ, ಕೇಂದ್ರ ಸಚಿವರು ಸೇರಿ ಗಣ್ಯಾತಿಗಣ್ಯರು ಭಾಗಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. 

ನಗರದ ಅರಮನೆ ಮೈದಾನದ ವೈಟ್ ಪೆಟಲ್ಸ್ ನಲ್ಲಿ ಸಂಜೆ 5 ಗಂಟೆಗೆ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು  ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಧ್ಯಕ್ಷತೆವಹಿಸಲಿದ್ದಾರೆ. 

ಯಡಿಯೂರಪ್ಪ ಅವರ ಕುರಿತು ವಿವಿಧ ಕ್ಷೇತ್ರಗಳ ಅವರ ಒಡನಾಡಿಗಳು ಬರೆದಿರುವ ಲೇಖನಗಳನ್ನು ಒಳಗೊಂಡ ದಣಿವರಿಯದ ಧೀಮಂತ ಎಂಬ ಅಭಿನಂದನಾ ಗ್ರಂಥವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಿಡುಗಡೆಗೊಳಿಸಲಿದ್ದಾರೆ. ವಿಧಾನಸಭೆ ವಿಪಕ್ಷದ ನಾಯಕ ಸಿದ್ಧರಾಮಯ್ಯ ಕಾಫಿ ಟೇಬಲ್ ಪುಸ್ತಕ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. 

ಸಮಾರಂಭದಲ್ಲಿ ಪಂಪ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಾಗೂ ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. 

ಸಮಾರಂಭ ಸ್ಥಳದ ಪರಿಶೀಲನೆ ನಡೆಸಿದ ಯಡಿಯೂರಪ್ಪ ಪುತ್ರ ವಿಜಯೇಂದ್ರ ಮಾತನಾಡಿ, ಇದು ಪಕ್ಷಾತೀತ ಕಾರ್ಯಕ್ರಮ. ದೊಡ್ಡ ಕಾರ್ಯಕ್ರಮ ನಡೆಸುವ ಉದ್ದೇಶವಿತ್ತು. ಆದರೆ, ಯಡಿಯೂರಪ್ಪ ಅವರೇ ಬೇಡ ಎಂದು ಹೇಳಿಿದರು. ಹಿಂದೆ ಜೆಡಿಎಸ್-ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ವೇಳೆ ರಾಜನಾಥ್ ಸಿಂಗ್ ಅವರೇ ಬಿಜೆಪಿ ಅಧ್ಯಕ್ಷರಾಗಿದ್ದರು. ಹೀಗಾಗಿ ಅವರನ್ನೇ ಉದ್ಘಾಟಕರನ್ನಾಗಿ ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. 

ಹಾರ ತುರಾಯಿ ತರದಿರಿ: ಯಡಿಯೂರಪ್ಪ ಮನವಿ
ನನ್ನ ಹುಟ್ಟುಹಬ್ಬದ ಸಂದರ್ಭ ಯಾರು ಕೂಡ ಹಾರ ತುರಾಯಿ ತರುವುದು ಬೇಡ ಎಂದು ಮುಖ್ಯಮಂತ್ರ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಎಲ್ಲರ ಹಾರೈಕೆ, ಹರಕೆ ಹಾಗೂ ಆಶೀರ್ವಾದಗಳಿಂದಲೇ ನಿಮ್ಮೆಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯ ಪಡೆದಿದ್ದೇನೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿ ತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದು ಎಂದು ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT