ಗೋಶಾಲೆ 
ರಾಜ್ಯ

ಮುಜರಾಯಿ ದೇವಾಲಯಗಳಲ್ಲಿ ಗೋಶಾಲೆ ನಿರ್ಮಿಸಲು ಕ್ರಮ: ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್

ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ಪ್ರಮಖ 25 ದೇವಾಲಯಗಳ ವ್ಯಾಪ್ತಿಯಲ್ಲಿ ಬೃಹತ್ ಗೋಶಾಲೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ತಿಳಿಸಿದ್ದಾರೆ.
 
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೋಶಾಲೆ ನಿರ್ಮಿಸಲು ಅನುಕೂಲವಾಗುವಂತೆ ಎ ದರ್ಜೆಯ ವ್ಯಾಪ್ತಿಗೆ ಬರುವ ದೇವಾಲಯಗಳ ಸುತ್ತ ಮುತ್ತ 10 ರಿಂದ 15 ಎಕರೆ ಭೂಮಿ ಗುರುತಿಸಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ಗೋಶಾಲೆಗಳಲ್ಲಿ ಗರಿಷ್ಠ 200 ಗೋವುಗಳನ್ನು ಸಾಕಲು ವ್ಯವಸ್ಥೆ ಮಾಡಲಾಗಿದೆ. ಗೋಶಾಲೆ ನಿರ್ಮಾಣ ಮಾಡಲು ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿ ಅವರ ಮಾರ್ಗದರ್ಶನ ಪಡೆಯಲಾಗುವುದು ಎಂದರು.

ರಾಜ್ಯದ ಎಲ್ಲ ದೇವಾಲಯಗಳ ಆಸ್ತಿ ಸಂರಕ್ಷಿಸಲು ಮತ್ತು ಅಲ್ಲಿನ ಆದಾಯ ಸೋರಿಕೆ ತಡೆಗಟ್ಟಲು ತೀರ್ಮಾನಿಸಿರುವ ಸರ್ಕಾರ ಈ ಕುರಿತು ವಿವರವಾದ ಪರಿಶೀಲನೆ ನಡೆಸಿ ಮುಂದಿನ ಮೂರು ತಿಂಗಳಲ್ಲಿ ವರದಿ ನೀಡುವಂತೆ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸೂಚನೆ ನೀಡಲಾಗಿದೆ. ಮುಜರಾಯಿ ದೇವಸ್ಥಾನಗಳ ಒಟ್ಟು ಆಸ್ತಿಯ ಪ್ರಮಾಣದ ಬಗ್ಗೆಯೂ ಮಾಹಿತಿ ನೀಡುವಂತೆ ಕೋರಲಾಗಿದೆ ಎಂದು ಹೇಳಿದರು.
 
ದೇವಾಲಯಗಳ ವ್ಯಾಪ್ತಿಯಲ್ಲಿನ ಆಸ್ತಿ ಸಂರಕ್ಷಿಸಬೇಕಿದ್ದು, ರಾಜ್ಯದಲ್ಲಿ 33 ಸಾವಿರಕ್ಕಿಂತ ಹೆಚ್ಚು ಮುಜುರಾಯಿ ದೇವಾಲಯಗಳಿದ್ದು ಇದರ ವ್ಯಾಪ್ತಿಯ ಆಸ್ತಿ,ಪಾಸ್ತಿ ಕುರಿತು ಸ್ಪಷ್ಟ ವಿವರ ಪಡೆಯಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಈ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ವಿವರ ನೀಡಿದರು.

ರಾಜ್ಯದ ನೂರು ಪ್ರಮುಖ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಸಪ್ತಪದಿನೆಯನ್ನು ಎರಡು ಹಂತಗಳಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮೊದಲ ಹಂತದ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 26 ರಂದು ನಡೆಯಲಿದ್ದು ಈ ಹಂತದಲ್ಲಿ ವಿವಾಹವಾಗಲಿಚ್ಚಿಸುವವರು ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದೆ. ಮೊದಲ ಹಂತದಲ್ಲಿ ವಿವಾಹವಾಗಲು 1218 ಮಂದಿ ಅರ್ಜಿಗಳನ್ನು ಪಡೆದಿದ್ದು ಇದರಲ್ಲಿ ಇನ್ನೂರು ಮಂದಿ ಈಗಾಗಲೇ ದಾಖಲೆ ಸಹಿತ ಅರ್ಜಿ ಸಲ್ಲಿಸಿದ್ದಾರೆ ಎಂದರು.

ಎರಡನೇ ಹಂತದ ಸಾಮೂಹಿಕ ವಿವಾಹ ಕಾರ್ಯಕ್ರಮ ಮೇ 24 ರಂದು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ವಿವಾಹವಾಗುವ ಪ್ರತಿ ಜೋಡಿಯ ಮೇಲೆ ಐವತ್ತೈದು ಸಾವಿರ ರೂಪಾಯಿ ಒದಗಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌