ಕರ್ನಾಟಕದ ಅಭಿವೃದ್ಧಿಗೆ ಮೊದಲ ಸಿಎಂ ದಿ. ಕೆ.ಸಿ. ರೆಡ್ಡಿ ಕೊಡುಗೆ ಅಪಾರ: ಗೋವಿಂದ ಕಾರಜೋಳ 
ರಾಜ್ಯ

ಕರ್ನಾಟಕದ ಅಭಿವೃದ್ಧಿಗೆ ಮೊದಲ ಸಿಎಂ ದಿ. ಕೆ.ಸಿ. ರೆಡ್ಡಿ ಕೊಡುಗೆ ಅಪಾರ: ಗೋವಿಂದ ಕಾರಜೋಳ

 ರಾಜ್ಯದ ಅಭಿವೃದ್ಧಿಗೆ ರಾಜ್ಯದ ಪ್ರಥಮ ಮುಖ್ಯಮಂತ್ರಿಗಳಾಗಿದ್ದ ದಿ. ಕೆ.ಸಿ. ರೆಡ್ಡಿ ಅವರ ಪಾತ್ರ ಅಪಾರವಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಬೆಂಗಳೂರು:  ರಾಜ್ಯದ ಅಭಿವೃದ್ಧಿಗೆ ರಾಜ್ಯದ ಪ್ರಥಮ ಮುಖ್ಯಮಂತ್ರಿಗಳಾಗಿದ್ದ ದಿ. ಕೆ.ಸಿ. ರೆಡ್ಡಿ ಅವರ ಪಾತ್ರ ಅಪಾರವಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಕ್ಯಾಸಂಬಳ್ಳಿ ಚೆಂಗಲರಾಯರೆಡ್ಡಿಯವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿ ಮಾತನಾಡಿದ ಅವರು, ಕೆ.ಸಿ. ರೆಡ್ಡಿ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷಗಳ ಕಾಲ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಮಧ್ಯ ಪ್ರದೇಶದ ರಾಜ್ಯಪಾಲರಾಗಿಯೂ ತಮ್ಮ ಹೆಜ್ಜೆ ಗುರುತು ದಾಖಲಿಸಿದ್ದಾರೆ ಎಂದರು.

ಕೆ.ಸಿ. ರೆಡ್ಡಿ ಮಹಾತ್ಮಾ ಗಾಂಧಿ ಅವರ ದರ್ಶನ ಭಾಗ್ಯದಿಂದ ಪ್ರಭಾವಿತರಾಗಿದ್ದರು. ರಾಜ್ಯದಲ್ಲಿ ಅನೇಕ ಕಾರ್ಖಾನೆಗಳ ಸ್ಥಾಪನೆಗೆ ಕೆ. ಸಿ. ರೆಡ್ಡಿ ಅವರು ಕಾರಣೀಭೂತರಾಗಿದ್ದಾರೆ. ಬೆಂಗಳೂರಿನ ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ (ಐ.ಟಿ.ಐ), ಹಾಗೂ ಹಿಂದುಸ್ಥಾನ್ ಮೆಷೀನ್ ಟೂಲ್ಸ್ (ಹೆಚ್.ಎಂ.ಟಿ) ಹಾಗೂ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿ.ಹೆಚ್.ಇ.ಎಲ್), ಮೈಸೂರಿನ ಸೆಂಟ್ರಲ್ ಫುಡ್ ಟೆಕ್ನೋಲಾಜಿಕಲ್ ರಿಸರ್ಚ್ ಇನ್‍ಸ್ಟಿಟ್ಯೂಟ್ (ಸಿ.ಎಫ್.ಟಿ.ಆರ್.ಐ), ಕೋಲಾರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿ.ಇ.ಎಂ.ಎಲ್) ಹಾಗೂ ಶಿವಮೊಗ್ಗದ ಜೋಗ ಜಲಪಾತದಡಿಯಲ್ಲಿ ಮಹಾತ್ಮಾ ಗಾಂಧಿ ಹೈಡ್ರೋ ಎಲೆಕ್ಟ್ರಿಕ್ ಸ್ಟೇಷನ್ ಸ್ಥಾಪನೆಯಲ್ಲಿ ಕೆ. ಸಿ. ರೆಡ್ಡಿ ಅವರ ಪರಿಶ್ರಮವಿತ್ತು ಎಂಬುದು ರಾಜ್ಯದ ಅಭಿವೃದ್ಧಿಯ ಬಗ್ಗೆ ಅವರ ಕಾಳಜಿಗೆ ಧ್ಯೋತಕವಾಗಿದೆ ಎಂದು ಶ್ಲಾಘಿಸಿದರು. 

ಕೇಂದ್ರ ಸಚಿವರಾಗಿ ಅಂದಿನ ಮಧ್ಯಪ್ರದೇಶದ (ಇಂದಿನ ಛತ್ತೀಸ್‍ಗಡದ) ಬಿಲಾಯ್, ಒರಿಸ್ಸಾದ ರೂರ್ಕೆಲಾ ಮತ್ತು ಅಂದಿನ ಬಿಹಾರದ (ಇಂದಿನ ರಾಂಚಿಯಲ್ಲಿ) ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ತಮಿಳುನಾಡಿನ ನೈವೇಲಿಯಲ್ಲಿ ಲಿಗ್ನೈಟ್ ಕಾರ್ಖಾನೆಯ ಸ್ಥಾಪನೆಗೆ ಕಾರಣರಾಗಿ ನಾಡುಕಟ್ಟಿದವರು.  ನಮ್ಮ ಹೆಮ್ಮೆಯ ಕೆ. ಸಿ. ರೆಡ್ಡಿ ಅವರುಸಮ-ಸಮಾಜವನ್ನು ಪ್ರತಿಪಾದಿಸುತ್ತಿದ್ದ  ಅವರು ಯುವ ಸಮುದಾಯಕ್ಕೆ  ಪ್ರೇರಣೆ ಹಾಗೂ ಸ್ಫೂರ್ತಿಯಾಗಿದ್ದಾರೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

ದಶಕಗಳ ಪ್ರಯತ್ನಕ್ಕೆ Trump ಕೊಳ್ಳಿ ಇಟ್ಟಿದ್ದಾರೆ: ಅಧ್ಯಕ್ಷನ ಆತುರ ನಿರ್ಧಾರಗಳೇ ಭಾರತ-ರಷ್ಯಾ-ಚೀನಾ ದೋಸ್ತಿಗೆ ಕಾರಣ!

ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್?: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ವರ್ಲ್ಡ್ ಟ್ರಾನ್ಸ್‌ಪ್ಲಾಂಟ್ ಗೇಮ್ಸ್: 63 ಪದಕ ಪಡೆದು ಮಿಂಚಿದ ಭಾರತದ ಕ್ರೀಡಾಪಟುಗಳು!

Cricket: 'Alcohol, Pornography...': ಡ್ರೀಮ್11 ಹೊರಕ್ಕೆ, ಜೆರ್ಸಿ ಸ್ಪಾನ್ಸರ್‌ಗೆ BCCI ಅರ್ಜಿ ಆಹ್ವಾನ, ಡೆಡ್‌ಲೈನ್ ನಿಗದಿ, ಅರ್ಹತೆ ಏನು?

SCROLL FOR NEXT