ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿ ವಿದ್ಯಾರ್ಥಿಗಳ ಪರ ವಕೀಲರ ವಕಾಲತು ವಹಿಸಲು ವಕೀಲರ ನಕಾರ; ಹೈಕೋರ್ಟ್ ಅಸಮಾಧಾನ

ಪಾಕಿಸ್ತಾನ ಜಿಂದಾಬಾದ್‌' ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಹುಬ್ಬಳ್ಳಿಯ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ನಿರಾಕರಿಸಿದ ಹುಬ್ಬಳ್ಳಿ ವಕೀಲರ ಸಂಘದ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: 'ಪಾಕಿಸ್ತಾನ ಜಿಂದಾಬಾದ್‌' ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಹುಬ್ಬಳ್ಳಿಯ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಲು ನಿರಾಕರಿಸಿದ ಹುಬ್ಬಳ್ಳಿ ವಕೀಲರ ಸಂಘದ ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸಂಘದ ನಿರ್ಧಾರ ಪ್ರಶ್ನಿಸಿ ಬಿ.ಟಿ.ವೆಂಕಟೇಶ್ ಸೇರಿ 24 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ನ್ಯಾಯಾಲಯದ ಆದೇಶವಿದ್ದರೂ, ವಕಾಲತ್ತು ವಹಿಸಲು ನಿರ್ಣಯಿಸಿದ ಸಂಘದ ಕ್ರಮ ನ್ಯಾಯಾಂಗ ನಿಂದನೆಯಾಗುತ್ತದೆ. ಇದು ಹೀಗೆ ಮುಂದುವರಿದಲ್ಲಿ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಲಾಗುವುದು ಎಂದು ಎಚ್ಚರಿಕೆ ನೀಡಿತು.

ಆರೋಪಿಗಳಿಗೂ ತಮ್ಮ ಪರ ವಾದ ಮಂಡಿಸುವ ಹಕ್ಕಿದೆ. ಉಗ್ರ ಅಜ್ಮಲ್ ಕಸಾಬ್‌ಗೇ ಕೂಡ ವಕೀಲರನ್ನು ಒದಗಿಸಲಾಗಿತ್ತು. ಈಗ ಈ ವಿದ್ಯಾರ್ಥಿಗಳ ಪರ ವಾದ ಕೇಳದಿರಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಹುಬ್ಬಳ್ಳಿ ವಕೀಲರ ಸಂಘದ ಇಂತಹ ನಿರ್ಣಯ ಕಾನೂನುಬಾಹಿರ ಎಂದೇ ಪರಿಗಣಿಸಬೇಕಾಗುತ್ತದೆ ಎಂದಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

SCROLL FOR NEXT