ಸಾಂದರ್ಭಿಕ ಚಿತ್ರ 
ರಾಜ್ಯ

ವೆಜ್ ಬಿರಿಯಾನಿ ಕೇಳಿದ ಗ್ರಾಹಕನಿಗೆ ಚಿಕನ್ ಬಿರಿಯಾನಿ ನೀಡಿದ ಶತಾಬ್ದಿ ಎಕ್ಸ್ ಪ್ರೆಸ್

ವೆಜ್ ಬಿರಿಯಾನಿ ಆರ್ಡರ್ ಮಾಡಿದ ಪ್ರಯಾಣಿಕನಿಗೆ ಮೈಸೂರಿನ ಶತಾಬ್ದಿ ಎಕ್ಸ್ ಪ್ರೆಸ್ ಚಿಕನ್ ಬಿರಿಯಾನಿ ನೀಡಿರುವ ಘಟನೆ ನಡೆದಿದೆ.

ಮೈಸೂರು: ವೆಜ್ ಬಿರಿಯಾನಿ ಆರ್ಡರ್ ಮಾಡಿದ ಪ್ರಯಾಣಿಕನಿಗೆ ಮೈಸೂರಿನ ಶತಾಬ್ದಿ ಎಕ್ಸ್ ಪ್ರೆಸ್ ಚಿಕನ್ ಬಿರಿಯಾನಿ ನೀಡಿರುವ ಘಟನೆ ನಡೆದಿದೆ.

ಮೈಸೂರಿನ ನಿವಾಸಿ, ಸುಮಂತ್ ಸಿ.ವಿ ಬೆಂಗಳೂರಿನಿಂದ ಮೈಸೂರಿಗೆ  ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದರು, ಈ ವೇಳೆ ಅವರು ವೆಜ್ ಬಿರಿಯಾನಿ ಆರ್ಡರ್ ಮಾಡಿದ್ದರು, ಆದರೆ ರೈಲು ಸಿಬ್ಬಂದಿ ಅವರಿಗೆ ಚಿಕನ್ ಬಿರಿಯಾನಿ ನೀಡಿದ್ದಾರೆ. ಈ ಸಂಬಂಧ ಅವರು ಲಿಖಿತ ದೂರು ದಾಖಲಿಸಿದ್ದಾರೆ.

ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ,  ಇದೊಂದು ಪ್ರಯಾಣಿಕನಿಗೆ ಮಾಡಿದ ಅವಮಾನ,  ಇದೊಂದು ರೀತಿಯ ಕಿರುಕುಳ ಎಂದು ಹೇಳಿದ್ದಾರೆ.

ಸಸ್ಯಾಹಾರಿ ಪ್ರಯಾಣಿಕರಿಗೆ ಮಾಂಸಾಹಾರಿ ಆಹಾರವನ್ನು ನೀಡುವುದು ಸೇವೆಯ ಕೊರತೆಗೆ ಕಾರಣವಾಗಿದೆ ಎಂದು ವಿವಿಧ ಗ್ರಾಹಕ ನ್ಯಾಯಾಲಯಗಳು ತನ್ನ ಆದೇಶಗಳಲ್ಲಿ ಗಮನಿಸಿವೆ.

ಸುಮಂತ್ ಅವರು ಫೋನ್ ಕರೆ ಮೂಲಕ ಹಿರಿಯ ರೈಲ್ವೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ.

"ರೈಲು ಮೈಸೂರು ತಲುಪಿದಾಗ, ಡಿಆರ್ಎಂ ಮೈಸೂರು ಕಳುಹಿಸಿದ ರೈಲ್ವೆ ಅಧಿಕಾರಿಯೊಬ್ಬರು ನನ್ನೊಂದಿಗೆ ಮಾತನಾಡಿ ಈ ವಿಷಯದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದ್ದಾರೆ. 

ನಾನು ಅದನ್ನು ನಿಜವಾಗಿಯೂ ಪ್ರಶಂಸಿಸುತ್ತೇನೆ ಆದರೂ ಈ ವಿಷಯದ ಬಗ್ಗೆ ನಾನು ಖಂಡಿತವಾಗಿ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ