ಸಾಂದರ್ಭಿಕ ಚಿತ್ರ 
ರಾಜ್ಯ

ವೆಜ್ ಬಿರಿಯಾನಿ ಕೇಳಿದ ಗ್ರಾಹಕನಿಗೆ ಚಿಕನ್ ಬಿರಿಯಾನಿ ನೀಡಿದ ಶತಾಬ್ದಿ ಎಕ್ಸ್ ಪ್ರೆಸ್

ವೆಜ್ ಬಿರಿಯಾನಿ ಆರ್ಡರ್ ಮಾಡಿದ ಪ್ರಯಾಣಿಕನಿಗೆ ಮೈಸೂರಿನ ಶತಾಬ್ದಿ ಎಕ್ಸ್ ಪ್ರೆಸ್ ಚಿಕನ್ ಬಿರಿಯಾನಿ ನೀಡಿರುವ ಘಟನೆ ನಡೆದಿದೆ.

ಮೈಸೂರು: ವೆಜ್ ಬಿರಿಯಾನಿ ಆರ್ಡರ್ ಮಾಡಿದ ಪ್ರಯಾಣಿಕನಿಗೆ ಮೈಸೂರಿನ ಶತಾಬ್ದಿ ಎಕ್ಸ್ ಪ್ರೆಸ್ ಚಿಕನ್ ಬಿರಿಯಾನಿ ನೀಡಿರುವ ಘಟನೆ ನಡೆದಿದೆ.

ಮೈಸೂರಿನ ನಿವಾಸಿ, ಸುಮಂತ್ ಸಿ.ವಿ ಬೆಂಗಳೂರಿನಿಂದ ಮೈಸೂರಿಗೆ  ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದರು, ಈ ವೇಳೆ ಅವರು ವೆಜ್ ಬಿರಿಯಾನಿ ಆರ್ಡರ್ ಮಾಡಿದ್ದರು, ಆದರೆ ರೈಲು ಸಿಬ್ಬಂದಿ ಅವರಿಗೆ ಚಿಕನ್ ಬಿರಿಯಾನಿ ನೀಡಿದ್ದಾರೆ. ಈ ಸಂಬಂಧ ಅವರು ಲಿಖಿತ ದೂರು ದಾಖಲಿಸಿದ್ದಾರೆ.

ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ,  ಇದೊಂದು ಪ್ರಯಾಣಿಕನಿಗೆ ಮಾಡಿದ ಅವಮಾನ,  ಇದೊಂದು ರೀತಿಯ ಕಿರುಕುಳ ಎಂದು ಹೇಳಿದ್ದಾರೆ.

ಸಸ್ಯಾಹಾರಿ ಪ್ರಯಾಣಿಕರಿಗೆ ಮಾಂಸಾಹಾರಿ ಆಹಾರವನ್ನು ನೀಡುವುದು ಸೇವೆಯ ಕೊರತೆಗೆ ಕಾರಣವಾಗಿದೆ ಎಂದು ವಿವಿಧ ಗ್ರಾಹಕ ನ್ಯಾಯಾಲಯಗಳು ತನ್ನ ಆದೇಶಗಳಲ್ಲಿ ಗಮನಿಸಿವೆ.

ಸುಮಂತ್ ಅವರು ಫೋನ್ ಕರೆ ಮೂಲಕ ಹಿರಿಯ ರೈಲ್ವೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ.

"ರೈಲು ಮೈಸೂರು ತಲುಪಿದಾಗ, ಡಿಆರ್ಎಂ ಮೈಸೂರು ಕಳುಹಿಸಿದ ರೈಲ್ವೆ ಅಧಿಕಾರಿಯೊಬ್ಬರು ನನ್ನೊಂದಿಗೆ ಮಾತನಾಡಿ ಈ ವಿಷಯದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದ್ದಾರೆ. 

ನಾನು ಅದನ್ನು ನಿಜವಾಗಿಯೂ ಪ್ರಶಂಸಿಸುತ್ತೇನೆ ಆದರೂ ಈ ವಿಷಯದ ಬಗ್ಗೆ ನಾನು ಖಂಡಿತವಾಗಿ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT