ದೇಶದ್ರೋಹ ಪ್ರಕರಣ: ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭೇಟಿಯಾದ ಬೆಂಗಳೂರು ವಕೀಲರು 
ರಾಜ್ಯ

ದೇಶದ್ರೋಹ ಪ್ರಕರಣ:  ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭೇಟಿಯಾದ ಬೆಂಗಳೂರು ವಕೀಲರು

ಬೆಂಗಳೂರು ವಕೀಲರ ಸಂಘದ ವಕೀಲರು ಶುಕ್ರವಾರ, ದೇಶದ್ರೋಹ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿರುವ ಕಾಶ್ಮೀರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು. 

ಬೆಳಗಾವಿ: ಬೆಂಗಳೂರು ವಕೀಲರ ಸಂಘದ ವಕೀಲರು ಶುಕ್ರವಾರ, ದೇಶದ್ರೋಹ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿರುವ ಕಾಶ್ಮೀರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು. 

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ 'ಪಾಕಿಸ್ತಾನ ಜಿಂದಾಬಾದ್ ' ಎಂದು ಘೋಷಣೆಯನ್ನೊಳಗೊಂಡ ವಿಡಿಯೋವನ್ನು ಹರಿಬಿಟ್ಟಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು  ಅಮಿರ್, ನಾಸಿರ್ ಹಾಗೂ ತಾಲಿಬ್ ಎಂದು ಗುರುತಿಸಲಾಗಿದೆ. 

ವಕೀಲರು ಬಂಧಿತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. 

ಇತ್ತೀಚೆಗೆ ಹೈಕೋರ್ಟ್, ಬಂಧಿತರ ಪರ ವಾದ ಮಂಡಿಸಲು ನಿರಾಕರಿಸಿದ ಹುಬ್ಬಳ್ಳಿ-ಧಾರವಾಡ ವಕೀಲರ ಸಂಘದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ನಂತರ, ಸಂಘ ಈ ನಿರ್ಣಯವನ್ನು ಹಿಂಪಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT