ಯಡಿಯೂರಪ್ಪ 
ರಾಜ್ಯ

ಬಜೆಟ್ ನಲ್ಲಿ ಮಹಾದಾಯಿ ನೀರು ಬಳಕೆಗೆ ಸೂಕ್ತ ಅನುದಾನ: ಸಿಎಂ ಯಡಿಯೂರಪ್ಪ

ಮಹಾದಾಯಿ ನೀರು ಹಂಚಿಕೆಯ ಐತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ನ್ಯಾಯಾಧಿಕರಣ ನೀಡಿರುವ ನೀರಿನ ಸಮರ್ಥ ಬಳಕೆಗೆ ಮುಂದಿನ ಬಜೆಟ್ ನಲ್ಲಿ ಸೂಕ್ತ ಅನುದಾನ ಮೀಸಲಿರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಬೆಂಗಳೂರು: ಮಹಾದಾಯಿ ನೀರು ಹಂಚಿಕೆಯ ಐತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ನ್ಯಾಯಾಧಿಕರಣ ನೀಡಿರುವ ನೀರಿನ ಸಮರ್ಥ ಬಳಕೆಗೆ ಮುಂದಿನ ಬಜೆಟ್ ನಲ್ಲಿ ಸೂಕ್ತ ಅನುದಾನ ಮೀಸಲಿರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದರು. ಅಲ್ಲದೆ ಹುಬ್ಬಳ್ಳಿ-ಧಾರವಾಡ ಪ್ರದೇಶದ ಜನರ ಅಗತ್ಯತೆಗಳನ್ನು ಪೂರೈಸಲು ಹೆಚ್ಚುವರಿ ನೀರು ಬಿಡುಗಡೆಗೆ ನೆರವಾಗುತ್ತದೆ ಎಂದರು. 

ಕರ್ನಾಟಕಕ್ಕೆ ಮಂಜೂರು ಮಾಡಿರುವ 13.5 ಟಿಎಂಸಿ ನೀರಿನ ಸದ್ಬಳಕೆಗೆ ಬಜೆಟ್ ನಲ್ಲಿ ಸೂಕ್ತ ಅನುದಾನ ಮೀಸಲಿರಿಸುವುದಾಗಿ ಸಿಎಂ ತಿಳಿಸಿದರು. 

ಮಹಾದಯಿ ನೀರು ಹಂಚಿಕೆ ನ್ಯಾಯಾಧಿಕರಣದ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ವಿಚಾರಣೆ ನಡೆಸಬೇಕಿದೆ. ಸದ್ಯ ನ್ಯಾಯಾಧಿಕರಣ ಕರ್ನಾಟಕಕ್ಕೆ 13.45 ಟಿಎಂಸಿ ನೀರು ಬಿಡುವಂತೆ ಸೂಚನೆ ನೀಡಿದೆ. ಇದನ್ನು ಗೋವಾ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT