ಸಂಗ್ರಹ ಚಿತ್ರ 
ರಾಜ್ಯ

ಬೆಳಗ್ಗೆ ವರ್ಗಾವಣೆ ರದ್ದು, ಸಂಜೆ ಐಪಿಎಸ್ ಅಧಿಕಾರಿ ಇಶಾ ಪಂತ್ ಮತ್ತೆ ವರ್ಗಾವಣೆ!

ಹಿರಿಯ ಐಪಿಎಸ್​ ಅಧಿಕಾರಿ ಇಶಾ ಪಂತ್ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ಇಶಾ ಪಂತ್ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮಾಧ್ಯಮವೊಂದು ವರದಿ ಮಾಡಿದ್ದು, ಐಪಿಎಸ್ ಅಧಿಕಾರಿ ಇಶಾ ಪಂತ್ ಅವರನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ ಎಂದು ಹೇಳಲಾಗಿದೆ. ಆ ಮೂಲಕ ಕಳೆದ ಎರಡು ದಿನಗಳ ಅಂತರದಲ್ಲಿ  ಇಶಾ ಪಂತ್ ಅವರನ್ನು ಎರಡು ಬಾರಿ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ 26 ರಂದು ಆಗ್ನೇಯ ವಿಭಾಗದ ಡಿಸಿಪಿ ಹುದ್ದೆಯಿಂದ ಸಿಐಡಿ, ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಈ ವರ್ಗಾವಣೆಗೆ ಇಂದು ಬೆಳಗ್ಗೆ ರಾಜ್ಯ ಸರ್ಕಾರ ತಡೆ ನೀಡಿ, ಆಗ್ನೇಯ ವಿಭಾಗದ ಡಿಸಿಪಿಯಾಗಿಯೇ ಇರಲು ಆದೇಶ ನೀಡಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಮತ್ತೆ ಐಶಾ ಪಂತ್ ಅವರನ್ನು, ಬೆಂಗಳೂರು ಸಿಟಿಯ ಕಮಾಂಡೋ ಸೆಂಟರ್ ಡಿಸಿಪಿಯಾಗಿ ವರ್ಗಾವಣೆ ಮಾಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇನ್ನು ಆಗ್ನೇಯ ವಿಭಾಗ ಡಿಸಿಪಿಯಾಗಿ ಜೋಶಿ ಶ್ರೀನಾಥ್ ಮಹದೇವ್ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT