ರಾಜ್ಯ

ಬೆಳಗ್ಗೆ ವರ್ಗಾವಣೆ ರದ್ದು, ಸಂಜೆ ಐಪಿಎಸ್ ಅಧಿಕಾರಿ ಇಶಾ ಪಂತ್ ಮತ್ತೆ ವರ್ಗಾವಣೆ!

Srinivasamurthy VN

ಬೆಂಗಳೂರು: ಹಿರಿಯ ಐಪಿಎಸ್​ ಅಧಿಕಾರಿ ಇಶಾ ಪಂತ್ ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮಾಧ್ಯಮವೊಂದು ವರದಿ ಮಾಡಿದ್ದು, ಐಪಿಎಸ್ ಅಧಿಕಾರಿ ಇಶಾ ಪಂತ್ ಅವರನ್ನು ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ ಎಂದು ಹೇಳಲಾಗಿದೆ. ಆ ಮೂಲಕ ಕಳೆದ ಎರಡು ದಿನಗಳ ಅಂತರದಲ್ಲಿ  ಇಶಾ ಪಂತ್ ಅವರನ್ನು ಎರಡು ಬಾರಿ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ 26 ರಂದು ಆಗ್ನೇಯ ವಿಭಾಗದ ಡಿಸಿಪಿ ಹುದ್ದೆಯಿಂದ ಸಿಐಡಿ, ಎಸ್​ಪಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಈ ವರ್ಗಾವಣೆಗೆ ಇಂದು ಬೆಳಗ್ಗೆ ರಾಜ್ಯ ಸರ್ಕಾರ ತಡೆ ನೀಡಿ, ಆಗ್ನೇಯ ವಿಭಾಗದ ಡಿಸಿಪಿಯಾಗಿಯೇ ಇರಲು ಆದೇಶ ನೀಡಿತ್ತು. ಆದರೆ ಮಧ್ಯಾಹ್ನದ ವೇಳೆಗೆ ಮತ್ತೆ ಐಶಾ ಪಂತ್ ಅವರನ್ನು, ಬೆಂಗಳೂರು ಸಿಟಿಯ ಕಮಾಂಡೋ ಸೆಂಟರ್ ಡಿಸಿಪಿಯಾಗಿ ವರ್ಗಾವಣೆ ಮಾಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇನ್ನು ಆಗ್ನೇಯ ವಿಭಾಗ ಡಿಸಿಪಿಯಾಗಿ ಜೋಶಿ ಶ್ರೀನಾಥ್ ಮಹದೇವ್ ನೇಮಕ ಮಾಡಲಾಗಿದೆ.

SCROLL FOR NEXT