ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಾಮೆಡ್ -ಕೆ ಸಹಾಯಕ ಕಾರ್ಯದರ್ಶಿ ಅಪಹರಿಸಿ ಹಣ ಸುಲಿಗೆ

ಕಾಮೆಡ್-ಕೆ ಸಹಾಯಕ ಕಾರ್ಯದರ್ಶಿ ಅವರನ್ನು ದುಷ್ಕರ್ವಿುಗಳು ಕಾರಿನಲ್ಲಿ ಅಪಹರಿಸಿ ಸುಲಿಗೆ ಮಾಡರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  

ಬೆಂಗಳೂರು: ಕಾಮೆಡ್-ಕೆ ಸಹಾಯಕ ಕಾರ್ಯದರ್ಶಿ ಅವರನ್ನು ದುಷ್ಕರ್ವಿುಗಳು ಕಾರಿನಲ್ಲಿ ಅಪಹರಿಸಿ ಸುಲಿಗೆ ಮಾಡರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಈ ಸಂಬಂಧ  ಸಂತ್ರಸ್ತರು  ನೀಡಿದ ದೂರಿನ ಮೇರೆಗೆ ಜ್ಞಾನಭಾರತಿ ಠಾಣೆ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವಿಶ್ವೇಶ್ವರಯ್ಯ ಲೇಔಟ್ 8ನೇ ಹಂತದ ಗುರುರಾಜ್, ಮಲ್ಲೇಶ್ವರದ ಕಾಮೆಡ್-ಕೆ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಫೆ.26ರ ಬೆಳಗ್ಗೆ 9.15ರಲ್ಲಿ ಬೈಕ್​ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ವಿಶ್ವೇಶ್ವರಯ್ಯ ಲೇಔಟ್ ಆರ್​ಟಿಒ ಕಚೇರಿ ಬಳಿ ದುಷ್ಕರ್ವಿುಗಳು ಬೈಕ್ ಅಡ್ಡಗಟ್ಟಿ ಸ್ವಿಫ್ಟ್ ಕಾರಿನಲ್ಲಿ ಅಪಹರಣ ಮಾಡಿದ್ದರು. 

ನೈಸ್ ರಸ್ತೆ ಮಾರ್ಗವಾಗಿ ತುಮಕೂರು ರಸ್ತೆ ಮೂಲಕ ತೆರಳಿ ಕಣ್ಣಿಗೆ ಬಟ್ಟೆ ಕಟ್ಟಿ ತೋಟದ ಮನೆಯಲ್ಲಿ ಕೂಡಿಟ್ಟಿದ್ದರು. ಬಳಿಕ ದುಷ್ಕರ್ವಿುಗಳು ನನ್ನ ಬಳಿಯಿದ್ದ ವಿಜಯಾ ಬ್ಯಾಂಕ್ ಚೆಕ್​ನಲ್ಲಿ 13.6 ಲಕ್ಷ ರುಪಾಯಿಯ ಹಣ  ಬರೆಸಿಕೊಂಡು, ಪೆನ್​ಡ್ರೖೆವ್, ಎಟಿಎಂಗಳನ್ನು ಕಸಿದುಕೊಂಡರು. 

ಮಧ್ಯಾಹ್ನ 3.30ರಲ್ಲಿ ಕಾರಿನಲ್ಲಿ ಗೊರಗುಂಟೆಪಾಳ್ಯ ಬಳಿ ಕರೆ ತಂದು ಎಟಿಎಂನಿಂದ 40 ಸಾವಿರ ರೂ. ಡ್ರಾ ಮಾಡಿಸಿಕೊಂಡು ಬಿಟ್ಟು ಕಳುಹಿಸಿದರು ಎಂದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಕೃತ್ಯದ ಹಿಂದೆ ಅಕ್ಕನ ಪತಿ ಕೈವಾಡವಿರುವ ಶಂಕೆ ಇದೆ ಎಂದು ಆರೋಪಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಾವಳಿ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT