ಸಂಗ್ರಹ ಚಿತ್ರ 
ರಾಜ್ಯ

ನಿಸ್ವಾರ್ಥ ಸೇವೆ ಸಲ್ಲಿಸಿದರೆ ಮಾತ್ರ ಸಮೃದ್ದ ಭಾರತದ ನಿರ್ಮಾಣ ಸಾಧ್ಯ; ವಜೂಭಾಯಿ ವಾಲಾ

ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡವರು ಜಾತಿ ಮತ ಬೇಧವನ್ನು ಬದಿಗಿರಿಸಿ, ನಿಸ್ವಾರ್ಥ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಮಾತ್ರ ಶಕ್ತಿಶಾಲಿ ದೇಶದ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ವಜೂಬಾಯಿ ರೂಢ ವಾಲಾ ಹೇಳಿದ್ದಾರೆ. 

ಬೆಂಗಳೂರು: ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡವರು ಜಾತಿ ಮತ ಬೇಧವನ್ನು ಬದಿಗಿರಿಸಿ, ನಿಸ್ವಾರ್ಥ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಮಾತ್ರ ಶಕ್ತಿಶಾಲಿ ದೇಶದ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ವಜೂಬಾಯಿ ರೂಢ ವಾಲಾ ಹೇಳಿದ್ದಾರೆ. 

ರಾಜಭವನದಲ್ಲಿ  ಶನಿವಾರ ನಡೆದ  ಭಾರತ್ ಮತ್ತು ಸ್ಕೌಟ್ಸ್‌ನ ವಿದ್ಯಾರ್ಥಿಗಳಿಗೆ ವಿವಿಧ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವವರೆ ನಿಜವಾದ ದೇಶಭಕ್ತರು. ಅವರಿಗೆ ಸ್ವಾಮಿ ವಿವೇಕಾನಂದರು ಮಾದರಿಯಾಗಬೇಕು. ಅವರ ತತ್ವ, ಸಿದ್ಧಾಂತ, ಬದುಕನ್ನು ಅನುಸರಿಸಿದಲ್ಲಿ ಶಕ್ತಿಶಾಲಿ ದೇಶ ನಿರ್ಮಾಣ ಶತಸಿದ್ಧ ಎಂದರು. 

ಯುವ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸಲು ಭಾರತ್ ಮತ್ತು ಸ್ಕೌಟ್ಸ್ ಪ್ರಯತ್ನ  ಶ್ಲಾಘನೀಯ. ರಾಜ್ಯದಲ್ಲಿ ನೆರೆ, ಬರದಂತಹ ಪ್ರಕೃತಿ ವಿಕೋಪಗಳು ಎದುರಾದಾಗ, ಭಾರತ್ ಸ್ಕೌಟ್ಸ್ ಸದಸ್ಯರು ಜನರಿಗೆ ನೆರವು ನೀಡಿದ್ದಾರೆ ಎಂದು ಹೇಳಿದರು. 

ಭಾರತ್ ಸ್ಕೌಟ್ಸ್ ಮತ್ತು ಮುಕ್ತ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಉಪಾಧ್ಯಕ್ಷ ಕೊಂಡಜ್ಜಿ ಬಿ. ಷಣ್ಣುಗಪ್ಪ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT