ಪೊಲೀಸ್ 
ರಾಜ್ಯ

ದುರುದ್ದೇಶದಿಂದ ಕಿರುಕುಳ: ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಡಿವೈಎಸ್‌ಪಿ ದೂರು, ವಿದಾಯ ಒಂದೆ ನನ್ನ ಮುಂದಿರೋ ಆಯ್ಕೆ!

ಹಿರಿಯ ಐಪಿಎಸ್ ಅಧಿಕಾರಿಗಳು ತಮಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಗಳು ತಮಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

ಪ್ರಸ್ತುತ ಸಿಐಡಿ ಕ್ರಿಮಿನಲ್ ತನಿಖಾ ಘಟಕ(ಸಿಐಯು) ಮಂಗಳೂರು ವಿಭಾಗದ ಡಿವೈಎಸ್ ಪಿ ಆಗಿ ಕಾರ್ಯನಿರ್ವಹಿಸುತ್ತಿರುವ ರತ್ನಾಕರ್ ಈ ದೂರು ಸಲ್ಲಿಸಿದ್ದು, 15 ದಿನಗಳಲ್ಲಿ ತಮ್ಮ ನೋವಿಗೆ ಸ್ಪಂದಿಸದಿದ್ದಲ್ಲಿ ಸೇವೆಗೆ ವಿದಾಯ ಹೇಳುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆರು ವರ್ಷಗಳ ಹಿಂದಿನ ಬೆಂಗಳೂರು ಎಂಜಿ ರಸ್ತೆಯಲ್ಲಿ‌ ನಡೆದಿದ್ದ ಪ್ರಭಾವಿ ವ್ಯಕ್ತಿಯೋರ್ವನ ಪುತ್ರನೋರ್ವನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ರತ್ನಾಕರ್ ಆರೋಪಿಸಿದ್ದಾರೆ.

2013 ರ ಜೂನ್ ನಲ್ಲಿ ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಟ್ರಿನಿಟಿ ಸರ್ಕಲ್ ನಲ್ಲಿ ನಡೆದ ಐಶಾರಾಮಿ ಕಾರೊಂದರ ಅಪಘಾತದಲ್ಲಿ ರಾಬರ್ಟ್ ಎಂಬಾತ ಮೃತಪಟ್ಟಿದ್ದನು. ಈ  ಸಂಬಂಧ ರಾಜಕೀಯ‌ ಮುಖಂಡನೋರ್ವನ ಪುತ್ರನನ್ನು ಬಂಧಿಸಲಾಗಿತ್ತು. 

ಈ ಘಟನೆಯ ತನಿಖಾ ಜವಾಬ್ದಾರಿ ಹೊತ್ತುಕೊಂಡಿದ್ದ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಹೊರಿಸಲಾಗಿದೆ. ಆದರೆ, ತಾವು ಘಟನೆ ನಡೆದ ಸಂದರ್ಭದಲ್ಲಿ ಅಶೋಕ ನಗರ ಠಾಣೆ ಸಂಚಾರಿ ಠಾಣೆ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದೆ. ಯಾವುದೇ ತಪ್ಪಿಲ್ಲದಿದ್ದರೂ ತಮ್ಮ ವಿರುದ್ಧ ಸುಳ್ಳು ಆರೋಪ ಹೊರಿಸಿ, ಹಿರಿಯ ಅಧಿಕಾರಿಗಳೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 

ಇದರಲ್ಲಿ ಡಿಜಿಪಿ, ಎಡಿಜಿಪಿ ಸೇರಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಮ್ಮನ್ನು ಹಿರಿಯ ಐಪಿಎಸ್ ಅಧಿಕಾರಿಗಳು ಎರಡು ಬಾರಿ ಹಿಂಬಡ್ತಿ ನೀಡಿದ್ದಾರೆ ಎಂದಿರುವ ರವಿಕಾಂತ್, ದೂರಿನ ಪ್ರತಿಯಲ್ಲಿ ಉಲ್ಲೇಖಿಸಿರುವ 11 ಪ್ರಶ್ನೆಗಳನ್ನಿಟ್ಟು ಉತ್ತರಸದೇ ಇದ್ದಲ್ಲಿ ಸೇವೆಗೆ ವಿದಾಯ ಹೇಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?