ಪ್ರಶಾಂತ್ 
ರಾಜ್ಯ

ಕೋಲಾರ: ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಪ್ರಶಾಂತ್ ಅಂತ್ಯಕ್ರಿಯೆ

ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಕೋಲಾರ ಮೂಲದ ಯೋಧ ಪ್ರಶಾಂತ್ ಅವರ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಕೋಲಾರ: ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಕೋಲಾರ ಮೂಲದ ಯೋಧ ಪ್ರಶಾಂತ್ ಅವರ ಅಂತ್ಯಕ್ರಿಯೆ  ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

26 ವರ್ಷದ ವೀರ ಯೋಧ ಪ್ರಶಾಂತ್ ಫೆ.26ರಂದು ಜಮ್ಮು ಕಾಶ್ಮೀರದ ರಜೋರಿ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡು ಹುತಾತ್ಮರಾಗಿದ್ದಾರೆ.

ಶನಿವಾರ ಬಂಗಾರಪೇಟೆಯಲ್ಲಿ ಹುತಾತ್ಮ ಯೋಧನ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಜಿಲ್ಲೆಯ ಗಣ್ಯರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಜನರು ಬಾಗಿಯಾಗಿದ್ದರು.

ಬಂಗಾರಪೇಟೆ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಿಂದ ಯೋಧನ ಹುಟ್ಟೂರು ಕಣಿಂಬೆಲೆ ಗ್ರಾಮದ ವರೆಗೆ ತೆರದ‌ ವಾಹನದಲ್ಲಿ ಹುತಾತ್ಮ ಯೋಧನ ಪಾರ್ಥಿವ ಶರೀರ ‌ಮೆರವಣಿಗೆ ನಡೆಯಿತು. ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಹುತಾತ್ಮ ಯೋಧನ ಅಂತ್ಯ ಸಂಸ್ಕಾರ ನಡೆಸಲಾಗುವುದು.

ವಿರೋಧದ ನಡುವೆಯೂ ಸೇನೆ ಸೇರಿದ್ದ: ದೇಶದ ರಕ್ಷಣೆ, ದೇಶ ಭಕ್ತಿಯ ಅಪಾರ ಅಭಿಮಾನ ಹೊಂದಿದ್ದರಿಂದ ತಾಯಿ ಅಣ್ಣನ ವಿರೋಧದ ನಡುವೆಯೂ ದೇಶ ಕಾಯುವ ಕೆಲಸಕ್ಕೆ 2015ರಲ್ಲಿ ಹೊರಟ ಪ್ರಶಾಂತ್‌ ವಿದ್ಯಾರ್ಥಿ ದೆಸೆಯಿಂದಲೇ ಮಿಲಿಟರಿಗೆ ಸೇರಬೇಕೆನ್ನುವ ಬಯಕೆ ಇತ್ತು. ಹೀಗಾಗಿ ಪದವಿ ಶಿಕ್ಷಣವನ್ನು ಬದಿಗೊತ್ತಿ ನಾಲ್ಕು ವರ್ಷಗಳಿಂದ ದೇಶದ ನಾನಾ ಕಡೆ ಸೇನಾ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು.

ಪ್ರಶಾಂತ್‌ ಅವರು ಜಮ್ಮುವಿನ 17 ನೇ ಮದ್ರಾಸ್‌ ರೆಜಿಮೆಂಟ್‌ನಲ್ಲಿನಲ್ಲಿ ಕಾರ‍್ಯ ನಿರ್ವಹಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ಬಗ್ಗೆ ಕುಟುಂಬಸ್ಥರಿಗೆ ಕೆಲವು ದಿನದ ಹಿಂದೆ ಮಾಹಿತಿ ಬಂದಿತ್ತು. ತಾಯಿ ಲಕ್ಷತ್ರ್ಮಮ್ಮ ಮತ್ತು ಅಣ್ಣ ಮಂಜು ಅವರು ಸೇನೆಯಲ್ಲಿರುವ ಪ್ರಶಾಂತ್‌ ಅವರನ್ನು ನೋಡಿಕೊಂಡು ಬರಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲಿ ಸಾವನ್ನಪ್ಪಿರುವ ಸುದ್ದಿ ತಿಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಒಬ್ಬ ರಾಜಿನಾಮೆ ಕೊಟ್ಟರೇನು? ನಮ್ಮ ಸರ್ಕಾರದಲ್ಲಿ 100 ನಾಗೇಂದ್ರ ಇದ್ದಾರೆ; ಸಿಎಂ ಡಿಕೆ ಶಿವಕುಮಾರ್

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!