ರಾಜ್ಯ

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ಸು ಅಪಘಾತ: ಹತ್ತು ಮಕ್ಕಳಿಗೆ ಗಾಯ

Shilpa D

ಕಲಬುರಗಿ: ಪ್ರವಾಸಕ್ಕೆಂದು ಹೊರಟಿದ್ದ ಶಾಲಾ ಮಕ್ಕಳಿದ್ದ ಖಾಸಗಿ ಬಸ್ಸೊಂದು ಮರಕ್ಕೆ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಬಸ್ಸು, ನಗರದ ವೆಂಕಟಗಿರಿ ಹೋಟೆಲ್ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ.  ಪರಿಣಾಮ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ  ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳೆಲ್ಲರೂ ಕಲಬುರಗಿ ನಗರದ ಚನ್ನವೀರ ನಗರ ಅಯ್ಯಪ್ಪ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT