ದೆಹಲಿಯಲ್ಲಿ ವ್ಯಾಯಾಮ ಮಾಡುತ್ತಿರುವ ಪ್ರಧಾನಿಯವರ ಫೋಟೋ ತೆಗೆಯುತ್ತಿರುವ ಕೃಷ್ಣಮೂರ್ತಿ ಲೋಕನಾಥ್ 
ರಾಜ್ಯ

ಪ್ರಧಾನಿ ಮೋದಿ ಹೋದಲ್ಲೆಲ್ಲ ಇವರು ಹೋಗುತ್ತಾರೆ, ಫೋಟೋ ತೆಗೆಯುತ್ತಾರೆ, ಇವರು ತುಮಕೂರಿನವರು!

ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಿಗೇ ಹೋಗಲಿ ಅವರ ಹಿಂದೆ ಪ್ರಧಾನ ಮಂತ್ರಿ ಕಾರ್ಯಾಲಯದ ಪ್ರಧಾನ ಫೋಟೋಗ್ರಾಫರ್ ಮತ್ತು ವಿಡಿಯೊಗ್ರಾಫರ್ ಇರುತ್ತಾರೆ. 

ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಿಗೇ ಹೋಗಲಿ ಅವರ ಹಿಂದೆ ಪ್ರಧಾನ ಮಂತ್ರಿ ಕಾರ್ಯಾಲಯದ ಪ್ರಧಾನ ಫೋಟೋಗ್ರಾಫರ್ ಮತ್ತು ವಿಡಿಯೊಗ್ರಾಫರ್ ಇರುತ್ತಾರೆ. 


ಪ್ರಧಾನಿಯವರ ಚಟುವಟಿಕೆಗಳ ಫೋಟೋ ತೆಗೆಯುವುದು, ವಿಡಿಯೊ ಮಾಡುವುದು ಇವರ ಕೆಲಸ. ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿರುವ ಫೋಟೋಗ್ರಾಫರ್ ಪ್ರಸಾರ ಭಾರತಿ ಉದ್ಯೋಗಿ ಯಡಲಮ್ ಕೃಷ್ಣಮೂರ್ತಿ ಲೋಕನಾಥ್ ತುಮಕೂರು ಜಿಲ್ಲೆಯವರು ಎಂಬುದು ಅನೇಕರಿಗೆ ಗೊತ್ತಿಲ್ಲ.


ಈ ಕನ್ನಡಿಗ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ ಎನ್ ಹೊಸಕೋಟೆಯ ಓಬಳಾಪುರದವರು. ಇಂದು ತುಮಕೂರಿಗೆ, ಬೆಂಗಳೂರಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವ ಪ್ರಧಾನಿಗಳ ಜೊತೆ ಈ ಫೋಟೋಗ್ರಾಫರ್ ಕೃಷ್ಣಮೂರ್ತಿಯವರು ಸಹ ಬರುತ್ತಿದ್ದಾರೆ. 


ಕೃಷ್ಣಮೂರ್ತಿಯವರು ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ಎರಡು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದು ಹಲವು ಕಾರ್ಯಕ್ರಮಗಳಲ್ಲಿ ಫೋಟೋಗ್ರಫಿ ಮಾಡಿದ ಅನುಭವ ಹೊಂದಿದ್ದಾರೆ. ''ಕಳೆದ 6 ವರ್ಷಗಳಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಅವರ ಜೊತೆ ಓಡಾಡಿ ತೆಗೆದ ಫೋಟೋಗಳು ನಿಜಕ್ಕೂ ಅವಿಸ್ಮರಣೀಯ, ಹಲವು ಸಂದರ್ಭಗಳಲ್ಲಿ ವಿದೇಶಗಳಿಗೆ ಹೋಗುವ ಅವಕಾಶ ಸಿಕ್ಕಿತು'' ಎನ್ನುತ್ತಾರೆ.


ಕೃಷ್ಣಮೂರ್ತಿಯವರಿಗೆ ಅತ್ಯಂತ ಅವಿಸ್ಮರಣೀಯವಾದ ಪ್ರವಾಸವೆಂದರೆ ಸ್ವಿಡ್ಜರ್ಲ್ಯಾಂಡ್ ಗೆ ಹೋಗಿದ್ದಂತೆ. ಅಲ್ಲಿ 15 ಡಿಗ್ರಿ ಸೆಲ್ಸಿಯಸ್ ಗೆ ಉಷ್ಣಾಂಶ ಇಳಿದಿತ್ತು. ಆ ಚಳಿಯಲ್ಲಿ ಮೋದಿಯವರು ವಾತಾವರಣಕ್ಕೆ ಮತ್ತು ನಮ್ಮ ಜೊತೆ ಹೊಂದಿಕೊಂಡಿದ್ದರು ಎಂದು ನಡೆದ ಘಟನೆಯನ್ನು ನೆನಪಿಸಿಕೊಳ್ಳುತ್ತಾರೆ ಲೋಕನಾಥ್. 


ಮೋದಿಯವರು ವಿದೇಶಗಳಿಗೆ ಹೋದ ಬಹುಪಾಲು ಪ್ರವಾಸದ ಫೋಟೋಗಳನ್ನು ಕೃಷ್ಣಮೂರ್ತಿ ಲೋಕನಾಥ್ ತೆಗೆದಿದ್ದಾರೆ. ಸುಮಾರು 40 ದೇಶಗಳಿಗೆ ಪ್ರಧಾನಿ ಜೊತೆ ಭೇಟಿ ಕೊಟ್ಟಿದ್ದಾರೆ. ಯುಪಿಎ-2 ಸರ್ಕಾರದ ಅವಧಿಯಲ್ಲಿ ಕೆಲಸದಿಂದ ವಿರಾಮ ತೆಗೆದುಕೊಂಡಿದ್ದರಂತೆ. ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಮತ್ತೆ ಕರೆಬಂತು ಎಂದು ಹೇಳಿಕೊಳ್ಳುವ ಕೃಷ್ಣಮೂರ್ತಿಯವರು ಅಬ್ದುಲ್ ಕಲಾಂ ಅವರು ರಾಷ್ಟ್ರಪತಿಗಳಾಗಿದ್ದಾಗ ಅವರ ಫೋಟೋಗ್ರಾಫರ್ ಆಗಿದ್ದರು.


ಈ ವೃತ್ತಿಗೆ ಹೇಗೆ ಬಂದಿರಿ ಎಂದು ಕೇಳಿದಾಗ, ತಮ್ಮ ಮಾವ ಎಂ ಸಿ ಗಿರೀಶ್ ಬೆಂಗಳೂರಿನಲ್ಲಿ ಕಲರ್ ಲ್ಯಾಬ್ ಇಟ್ಟುಕೊಂಡಿದ್ದರು. ಅವರಿಂದ ಪ್ರೇರಣೆಗೊಂಡು ಫೋಟೋಗ್ರಫಿ ಕಲಿತೆ. ಪಿಯುಸಿ ಶಿಕ್ಷಣ ಮುಗಿಸಿ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೇರಿ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ ಟಿಟ್ಯೂಟ್ ನಲ್ಲಿ 1989ರಲ್ಲಿ ಡಿಪ್ಲೊಮಾ ತೇರ್ಗಡೆ ಮಾಡಿಕೊಂಡೆ. ಇದೀಗ ನನ್ನ ತವರು ಜಿಲ್ಲೆಯಲ್ಲಿ ಪ್ರಧಾನಿಯವರ ಕಾರ್ಯಕ್ರಮದಲ್ಲಿ ಫೋಟೋ ತೆಗೆಯುವ ಅವಕಾಶ ಬಂದಿರುವುದು ತುಂಬಾ ಸಂತೋಷವಾಗುತ್ತಿದೆ ಎನ್ನುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT