ಬ್ಯಾಟರಾಯನಪುರ ಪೋಲೀಸ್ ಠಾಣೆ 
ರಾಜ್ಯ

ಬೆಂಗಳೂರು: ಪ್ರವಾಸಿಗನ ಸೋಗಿನಲ್ಲಿ ಕಾರು ಕಳವು, ಆರೋಪಿಗೆ ಶೋಧ

ಪ್ರವಾಸಿಗನ ಸೋಗಿನಲ್ಲಿ ಟ್ರಾವೆಲ್​​ವೊಂದಕ್ಕೆ‌ ಕರೆ‌ ಮಾಡಿ‌ 22 ಲಕ್ಷ ರೂ ಮೌಲ್ಯದ ಕಾರೊಂದು ಕಳ್ಳತನ ಮಾಡಿರುವ ಘಟನೆ ಬ್ಯಾಟರಾಯನಪುರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ.

ಬೆಂಗಳೂರು: ಪ್ರವಾಸಿಗನ ಸೋಗಿನಲ್ಲಿ ಟ್ರಾವೆಲ್​​ವೊಂದಕ್ಕೆ‌ ಕರೆ‌ ಮಾಡಿ‌ 22 ಲಕ್ಷ ರೂ ಮೌಲ್ಯದ ಕಾರೊಂದು ಕಳ್ಳತನ ಮಾಡಿರುವ ಘಟನೆ ಬ್ಯಾಟರಾಯನಪುರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ.

ಅರುಣ್ ಕುಮಾರ್ ಕಾರು ಕಳೆದುಕೊಂಡ ಚಾಲಕ. ವ್ಯಕ್ತಿಯೋರ್ವ ಜಸ್ಟ್ ಡಯಲ್ ಮೂಲಕ ಕಡಬಗರೆಯ ಸೌಮ್ಯ ಟೂರ್ಸ್ ಅಂಡ್ ಟ್ರಾವೆಲ್ಸ್ ಸಂಪರ್ಕಿಸಿ ಮೈಸೂರು ಪ್ರವಾಸಕ್ಕೆ ಹೋಗಬೇಕಾಗಿದ್ದು, ಕಾರು ಬಾಡಿಗೆಗೆ ಬೇಕಾಗಿದೆ ಎಂದು ಹೇಳಿ ಬುಕ್ ಮಾಡಿದ್ದ.

ನಂತರ ಟ್ರಾವೆಲ್ಸ್​​ನವರು ಕಾರು ಚಾಲಕ ಅರುಣ್​​ಗೆ ಹೇಳಿ ಮೈಸೂರಿಗೆ ಹೋಗುವಂತೆ ಸೂಚಿಸಿದ್ದರು. ಇದರಂತೆ ಅರುಣ್, ಕಾನಿಷ್ಕ ಹೋಟೆಲ್​​ಗೆ ಪ್ರಯಾಣಿಕನನ್ನು ಕರೆತರಲು ಹೋಗಿದ್ದ. ಈ ವೇಳೆ ಕಾರು ಹತ್ತಿದ್ದ ಪ್ರಯಾಣಿಕ ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಬಳಿಗೆ ತೆರಳುವಂತೆ ಹೇಳಿದ್ದ. ನಂತರ ಹೋಟೆಲ್​​ನಲ್ಲಿ ಪೇಮೆಂಟ್ ಕಲೆಕ್ಷನ್ ಮಾಡಿಕೊಳ್ಳಬೇಕಿದೆ. ಬಳಿಕ ಮಿಸ್ ಚಿಫ್ ಹೋಟೆಲ್​​​ನಲ್ಲಿ ನನ್ನ ಸ್ನೇಹಿತ ಇದ್ದಾನೆ. 10 ಸಾವಿರ ರೂ ಹಣ ಕೊಡುತ್ತಾರೆ ತೆಗೆದುಕೊಂಡು ಬಾ ಎಂದು ಅರುಣ್​​ಗೆ ಕಳುಸಿದ್ದ ವ್ಯಕ್ತಿ, ಎಸಿ ಆನ್ ಮಾಡಿ ಹೋಗುವಂತೆ ಸೂಚಿಸಿದ್ದನು. ಕೀ ಕಾರಿನಲ್ಲೇ ಬಿಟ್ಟು ಹಣ ತೆಗೆದುಕೊಂಡು ಬರಲು ಹೋದಾಗ ಕಾರು ಸಮೇತ ಆರೋಪಿ ಪರಾರಿಯಾಗಿದ್ದಾನೆ.

ಅರುಣ್ ಹಿಂತಿರುಗಿದಾಗ ಕಾರು ಅಲ್ಲಿಲ್ಲದ್ದನ್ನು ಕಂಡು ಗಾಬರಿಯಾಗಿದ್ದಾನೆ. ಘಟನೆ ಸಂಬಂಧ ಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪೋಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಸಕ್ತ ಸಾಲಿನ ಅಂತಿಮ ದ್ವೈಮಾಸಿಕ ಹಣಕಾಸು ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ

Pariksha Pe Charcha 2026: ಅಗ್ಗದಲ್ಲಿ ಡೇಟಾ ಸಿಗುತ್ತದೆ ಎಂದು ಇಂಟರ್ನೆಟ್ ಲ್ಲಿ ಸಮಯ ಕಳೆಯಬೇಡಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ನೀಡಿದ ಸಲಹೆಗಳೇನು?-Video

'ಮೊದಲು ಇರಾನ್ ತೊರೆಯಿರಿ': ಡೊನಾಲ್ಡ್ ಟ್ರಂಪ್ ದಾಳಿ ಎಚ್ಚರಿಕೆ ಬೆನ್ನಲ್ಲೇ ಅಮೆರಿಕನ್ನರಿಗೆ ವೈಟ್ ಹೌಸ್ ಕೊನೆಯ ಎಚ್ಚರಿಕೆ!

T20 World Cup 2026: 'ನಮಗೋಸ್ಕರ ಭಾರತ ವಿರುದ್ಧ ಆಡಿ': ಆರ್ಥಿಕ ಸಂಕಷ್ಟದಲ್ಲಿರುವ 'ಆತಿಥೇಯ' ಶ್ರೀಲಂಕಾ ಪಾಕಿಸ್ತಾನಕ್ಕೆ ಮನವಿ

'ನೀನು Indian-Bollywood...ನಾವು ಕೊರಿಯನ್ನರು; ಕಿರಿಯ ತಂಗಿಯನ್ನೇ ದ್ವೇಷಿಸುತ್ತಿದ್ದ ಮೂವರು ಸೋದರಿಯರು, ಡೈರಿಯಲ್ಲಿದೆ ಬೆಚ್ಚಿಬೀಳಿಸುವ ಸಂಗತಿ..!

SCROLL FOR NEXT