ಬಾಗಲಕೋಟೆ: ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ಥರ ಮನೆ ಮೇಲೆ ದಾಳಿ! 
ರಾಜ್ಯ

ಬಾಗಲಕೋಟೆ: ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ಥರ ಮನೆ ಮೇಲೆ ದಾಳಿ!

ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತನ ಮನೆ ಮೇಲೆ ದಾಳಿ ಮಾಡಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ:  ಐಟಿ ಅಧಿಕಾರಿಗಳ ಸೋಗಿನಲ್ಲಿ ಸಂತ್ರಸ್ತನ ಮನೆ ಮೇಲೆ ದಾಳಿ ಮಾಡಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2019ರ ಡಿ.23ರಂದು ಈ ಘಟನೆ ನಡೆದಿದ್ದು, ಅಲಗೂರು ಗ್ರಾಮದ ಲಕ್ಷ್ಮಣ್ ಎಂಬುವವರ ಮನೆ ಮೇಲೆ ಐಟಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಲಾಗಿದೆ.

ಈ ಸಂದರ್ಭದಲ್ಲಿ ನಕಲಿ ಅಧಿಕಾರಿಗಳು 3 ಮೊಬೈಲ್ ಹಾಗೂ 12,500 ರೂ ಜಪ್ತಿ ಮಾಡಿಕೊಂಡು, ಬಳಿಕ ಬೆಳಗಾವಿಯ ಐಟಿ ಕಚೇರಿಗೆ ಬಂದು ಭೇಟಿಯಾಗುವಂತೆ ಸೂಚಿಸಿ ಪರಾರಿಯಾಗಿದ್ದಾರೆ. ಅವರ ಮಾತನ್ನು ನಂಬಿ ಬೆಳಗಾವಿಗೆ ತೆರಳಿದ ಲಕ್ಶ್ಮಣ್ ತಾವು ಐಟಿ ಕಚೇರಿಗೆ ಭೇಟಿ ಕೊಟ್ಟಾಗಲೇ ಮೋಸ ಹೋಗಿರುವುದು ಬಹಿರಂಗವಾಗಿದೆ.

ಇತ್ತೀಚೆಗೆ ಉಂಟಾಗಿರುವ ನೆರೆ, ಪ್ರವಾಹದಿಂಡ ಸಂತ್ರಸ್ಥರಾಗಿದ್ದ ಲಕ್ಶ್ಮಣ್ ಮನೆಗೆ ಕೋಟಿ ಕೋಟಿ ರು. ಹಣ ಬಂದಿದೆ ಎಂದು ಸುದ್ದಿ ಹಬ್ಬಿತ್ತು. ಇದನ್ನು ನಂಬಿ ನಕಲಿ ಐಟಿ ಅಧಿಕಾರಿಗಳ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಈ ಸಂಬಂಧ  ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

Hong Kong ಅಗ್ನಿ ಪ್ರಮಾದ: ಮೂವರ ಬಂಧನ; 55 ಮಂದಿಯ ಜೀವ ತೆಗೆಯಿತಾ ಸಿಗರೇಟ್ ಕಿಡಿ? ವೈರಲ್ ಆಗಿರುವ ವಿಡಿಯೋದಲ್ಲೇನಿದೆ?

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ

LPG ಆಮದು: ಭಾರತ-ಅಮೆರಿಕ ಒಪ್ಪಂದ ತೈಲ ಸಂಸ್ಥೆಗಳಿಗೆ ದುಬಾರಿ; ಗ್ರಾಹಕರ ಮೇಲೆ ಪರಿಣಾಮ? ತಜ್ಞರು ಹೇಳಿದ್ದೇನು?

SCROLL FOR NEXT