ಹಂಪಿಯ ಒಂದು ನೋಟ 
ರಾಜ್ಯ

ಹಂಪಿಯಲ್ಲಿ ಶೀಘ್ರವೇ ಬ್ಯಾಟರಿ ಚಾಲಿತ ರೈಲು, ಡಬಲ್ ಡೆಕ್ಕರ್ ಬಸ್ ಸೇವೆ ಪ್ರಾರಂಭ

ಹಂಪಿಯ ವಿಶ್ವ ಪಾರಂಪರಿಕ ತಾಣಕ್ಕೆ ಪ್ರವಾಸಿಗರನ್ನು ಹೆಚ್ಚು ಹೆಚ್ಚು ಆಕರ್ಷಿಸಲು ಬಳ್ಲಾರಿ ಜಿಲ್ಲಾಡಳಿತ ಸಜ್ಜಾಗಿದ್ದು ಶೀಘ್ರದಲ್ಲೇ ಬ್ಯಾಟರಿ ಚಾಲಿತ ರೈಲುಗಳನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. 

ಬಳ್ಳಾರಿ: ಹಂಪಿಯ ವಿಶ್ವ ಪಾರಂಪರಿಕ ತಾಣಕ್ಕೆ ಪ್ರವಾಸಿಗರನ್ನು ಹೆಚ್ಚು ಹೆಚ್ಚು ಆಕರ್ಷಿಸಲು ಬಳ್ಲಾರಿ ಜಿಲ್ಲಾಡಳಿತ ಸಜ್ಜಾಗಿದ್ದು ಶೀಘ್ರದಲ್ಲೇ ಬ್ಯಾಟರಿ ಚಾಲಿತ ರೈಲುಗಳನ್ನು ಪರಿಚಯಿಸಲು ಸಿದ್ದತೆ ನಡೆಸಿದೆ. ಮೂರು ಬೋಗಿಗಳನ್ನು ಹೊಂದಿರುವ ಈ ರೈಲು ಒಮ್ಮೆಗೆ  90 ಪ್ರವಾಸಿಗರನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ವಿಶ್ವ ಪರಂಪರೆ ತಾಣದ ವಿಸ್ತೀರ್ಣ ಹೆಚ್ಚಿರುವ ಕಾರಣ ಬೇಸಿಗೆಯಲ್ಲಿ ಪ್ರವಾಸಿಗರು ಇಲ್ಲಿಗೆ ಬಂದು ನಡೆದಾಡುವುದು ಕಷ್ಟವಾಗುತ್ತದೆ. ಇದರಿಂದಾಗಿ ಮಾಲಿನ್ಯ ರಹಿತ ವಾಹನಗಳನ್ನು ಪರಿಚಯಿಸಲು ಆಡಳಿತ ನಿರ್ಧರಿಸಿದೆ. ಪ್ರತಿ ಕೋಚ್  32 ಆಸನಗಳನ್ನು ಹೊಂದಿರುತ್ತದೆ ಮತ್ತು ಮೂರು ಇಂತಹಾ ಕೋಚ್ ಗಳನ್ನು ಇಂಜಿನ್ ಗೆ ಜೋಡಿಸಲಾಗುತ್ತದೆ ಎಂದು ಮೂಲಗಳು ಹೇಳಿದೆ.

ಈ ಬ್ಯಾಟರಿ ಚಾಲಿತ ರೈಲು ವಿರೂಪಾಕ್ಷ ದೇವಾಲಯ, ಉಗ್ರ ನರಸಿಂಹ, ಸಾಸಿವೆಕಾಳು ಗಣಪತಿ, ರಾಣಿಯ ಸ್ನಾನಗೃಹ, ಕಮಲ ಮಹಲ್ ಸೇರಿದಂತೆ ಪ್ರಮುಖ ಸ್ಮಾರಕಗಳನ್ನು ಒಟ್ತಾಗಿಸಲಿದೆ. ಹಂಪಿಯ ಯಾವುದೇ ಸ್ಮಾರಕಗಳನ್ನು ಬಿಡದಂತೆ ಎಲ್ಲವನ್ನೂ ಈ ರೈಲು ಸಂಪರ್ಕಿಸಲಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ  ಎಸ್.ಎಸ್.ನಕುಲ್ ಪತ್ರಿಕೆಗೆ ಹೇಳಿದ್ದಾರೆ. ಹಂಪಿಯ ಅನೇಕ ಸ್ಥಳಗಳಲ್ಲಿ ದೊಡ್ಡ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿರುವುದರಿಂದ, ಬ್ಯಾಟರಿ ಚಾಲಿತ ಈ ರೈಲುಗಳು ಹೆಚ್ಚಿನ ಜನರನ್ನು ಆಕರ್ಷಿಸಬಹುದು. ಹಂಪಿ ಸ್ಮಾರಕಗಳ ದರ್ಶನ ಪಡೆಯಲು ಪ್ರವಾಸಿಗರಿಗೆ ಸಹಾಯ ಮಾಡಲು ಬ್ಯಾಟರಿ ಚಾಲಿತ ಡಬಲ್ ಡೆಕ್ಕರ್ ಬಸ್‌ಗಳನ್ನು ಪರಿಚಯಿಸುವ ಯೋಜನೆ ಸಿದ್ಧವಾಗಿದೆ, ”ಎಂದು ಅವರು ಹೇಳಿದರು.

ಕಳೆದ ತಿಂಗಳು ಹಂಪಿಯಲ್ಲಿ ಬ್ಯಾಟರಿ ಚಾಲಿತ ವಾಹನವೊಂದರ ಅಪಘಾತದ ನಂತರ ಅಂತಹ ವಾಹನಗಳ ಸೇವೆಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಗಿತ್ತು.  ಪ್ರಸ್ತುತ, ವಿಜಯ ವಿಟ್ಟಲ ದೇವಾಲಯ ಸಂಕೀರ್ಣಕ್ಕೆ ಪ್ರವಾಸಿಗರನ್ನು ಕರೆದೊಯ್ಯಲು ನಾಲ್ಕು ವಾಹನಗಳಿದೆ. ಏಕೆಂದರೆ  ಇತರ ವಾಹನಗಳ ಸಂಚಾರವನ್ನು ದೇವಾಲಯದ ಸಂಕೀರ್ಣ ಮತ್ತು ಸುತ್ತಮುತ್ತ ನಿರ್ಬಂಧಿಸಲಾಗಿದೆ. "ಹಂಪಿಯು ವ್ಯಾಪ್ತಿದೊಡ್ಡದಾಗಿದೆ. ದೂರದ ಕಾರಣಕ್ಕೆ  ಹಲವಾರು ಸ್ಮಾರಕಗಳನ್ನು ಪ್ರವಾಸಿಗರು ನೋಡುವುದನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ.ಡಬಲ್ ಡೆಕ್ಕರ್ ಬಸ್ ಮತ್ತು ಬ್ಯಾಟರಿ ಚಾಲಿತ ರೈಲು ವಾಸಿಗರಿಗೆ ಸಾಕಷ್ಟು ಸಹಾಯ ಮಾಡುತ್ತದೆ ”ಎಂದು ಸ್ಥಳೀಯರೊಬ್ಬರು ಹೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT