ಸೋಮಶೇಖರ್ ರೆಡ್ಡಿ (ಸಂಗ್ರಹ ಚಿತ್ರ) 
ರಾಜ್ಯ

ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ದೇಶದಲ್ಲಿ ಬಹುಸಂಖ್ಯಾತರಾಗಿರುವ ಹಿಂದೂಗಳು ಸಿಎಎ ವಿರೋಧಿಸುತ್ತಿರುವ ಅಲ್ಪಸಂಖ್ಯಾತರ ಮೇಲೆ ಖಡ್ಗ ಜಳಪಿಸಿದರೆ ಅವರೆಲ್ಲರೂ ನಿರ್ನಾಮವಾಗುತ್ತಾರೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ  ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ದೇಶದಲ್ಲಿ ಬಹುಸಂಖ್ಯಾತರಾಗಿರುವ ಹಿಂದೂಗಳು ಸಿಎಎ ವಿರೋಧಿಸುತ್ತಿರುವ ಅಲ್ಪಸಂಖ್ಯಾತರ ಮೇಲೆ ಖಡ್ಗ ಜಳಪಿಸಿದರೆ ಅವರೆಲ್ಲರೂ ನಿರ್ನಾಮವಾಗುತ್ತಾರೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ  ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನಿನ್ನೆ ಬಳ್ಳಾರಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಇಂದು ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರು ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಶಾಸಕರ ವಿರುದ್ಧ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ ಮತ್ತು ಈ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಕೆ ಬಾಬಾ ಅವರು ಹೇಳಿದ್ದಾರೆ.

ಇಂದು ಬೆಳಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ನೇತೃತ್ವದ ಕಾಂಗ್ರೆಸ್ ನಿಯೋಗ  ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರನ್ನು ಭೇಟಿ ಮಾಡಿ, ಸೋಮಶೇಖರ್ ರೆಡ್ಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮನವಿ ಸಲ್ಲಿಸಿತ್ತು. ಪೊಲೀಸ್ ಮಹಾ  ನಿರ್ದೇಶಕರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ಮನವಿ ಸ್ವೀಕರಿಸಿದ್ದರು.

ಜನವರಿ 3ರಂದು ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ'ದೇಶಭಕ್ತ ನಾಗರೀಕರ ವೇದಿಕೆ' ವತಿಯಿಂದ ಸಿಎಎ ಹಾಗೂ ಎನ್‌‌ಆರ್ ಸಿ ಪರವಾಗಿ ನಡೆದ ಸಭೆ ಹಾಗೂ ಮೆರವಣಿಗೆಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT