ತುಂಗಾರತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ 
ರಾಜ್ಯ

ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಕೋಕ್ ನೀಡಿದ ಬಿಜೆಪಿ ಸರ್ಕಾರ

ಐತಿಹಾಸಿಕ ಹಂಪಿ ಉತ್ಸವಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇರುವಂತೆಯೇ  ಹಂಪಿ ನದಿ ತೀರದಲ್ಲಿ ತುಂಗಾರತಿ ಮಾಡುವ ಹಂಪಿ ಉತ್ಸವಕ್ಕೆ  ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

ಹೊಸಪೇಟೆ: ಐತಿಹಾಸಿಕ ಹಂಪಿ ಉತ್ಸವಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇರುವಂತೆಯೇ  ಹಂಪಿ ನದಿ ತೀರದಲ್ಲಿ ತುಂಗಾರತಿ ಮಾಡುವ ಹಂಪಿ ಉತ್ಸವಕ್ಕೆ  ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

ಹಂಪಿ ಉತ್ಸವಕ್ಕೂ ಮುನ್ನ ತುಂಗಾರತಿ ಮಾಡೋದು  ವಾಡಿಕೆ. ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಆನಂದ್ ಸಿಂಗ್ ಮತ್ತಿತರರು ಪಾಲ್ಗೊಂಡಿದ್ದರು. ತುಂಗಾರತಿ ಕಾರ್ಯಕ್ರಮವನ್ನು ನದಿ ತಟದಲ್ಲಿ ನೋಡಲು ಜನಸಾಗರವೇ ಹರಿದು ಬಂದಿತ್ತು. 

ತುಂಗಾರತಿಯಲ್ಲಿ ಭಾಗಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮಣ್ ಸವದಿ, 
ಸದ್ಯಕ್ಕೆ ವಿಜಯನಗರ ಜಿಲ್ಲೆ ಘೋಷಣೆ ಇಲ್ಲ, ಮೊದಲು ಆನಂದ್ ಸಿಂಗ್ ಮೊದಲು ಮಂತ್ರಿ ಆಗ್ಲಿ ಆಮೇಲೆ ವಿಜಯನಗರ ಜಿಲ್ಲೆ ಘೋಷಣೆ ವಿಚಾರ ಮಾಡೋಣ ಎಂದು ಹೇಳಿದರು. 

ಬರುವ ಹಂಪಿ ಉತ್ಸವದ ದಿನದಂದು ವಿಜಯನಗರ ಜಿಲ್ಲೆ ಘೋಷಣೆ ಆಗುತ್ತೆ ಎಂದು ಆನಂದ್ ಸಿಂಗ್ ಭರವಸೆಯಲ್ಲಿದ್ದರು. ಆದರೆ, ಲಕ್ಷ್ಮಣ್ ಸವದಿ ಈ ರೀತಿಯ ಹೇಳಿಕೆ ನೀಡುವ ಮೂಲಕ ಆನಂದ್ ಸಿಂಗ್ ಇಟ್ಟುಕೊಂಡಿದ್ದ ಭರವಸೆ ಹುಸಿಯಾಗಿದ್ದು, ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಬಿಜೆಪಿ ಸರ್ಕಾರ ಕೋಕ್ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT