ತುಂಗಾರತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ 
ರಾಜ್ಯ

ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಕೋಕ್ ನೀಡಿದ ಬಿಜೆಪಿ ಸರ್ಕಾರ

ಐತಿಹಾಸಿಕ ಹಂಪಿ ಉತ್ಸವಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇರುವಂತೆಯೇ  ಹಂಪಿ ನದಿ ತೀರದಲ್ಲಿ ತುಂಗಾರತಿ ಮಾಡುವ ಹಂಪಿ ಉತ್ಸವಕ್ಕೆ  ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

ಹೊಸಪೇಟೆ: ಐತಿಹಾಸಿಕ ಹಂಪಿ ಉತ್ಸವಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇರುವಂತೆಯೇ  ಹಂಪಿ ನದಿ ತೀರದಲ್ಲಿ ತುಂಗಾರತಿ ಮಾಡುವ ಹಂಪಿ ಉತ್ಸವಕ್ಕೆ  ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು.

ಹಂಪಿ ಉತ್ಸವಕ್ಕೂ ಮುನ್ನ ತುಂಗಾರತಿ ಮಾಡೋದು  ವಾಡಿಕೆ. ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಆನಂದ್ ಸಿಂಗ್ ಮತ್ತಿತರರು ಪಾಲ್ಗೊಂಡಿದ್ದರು. ತುಂಗಾರತಿ ಕಾರ್ಯಕ್ರಮವನ್ನು ನದಿ ತಟದಲ್ಲಿ ನೋಡಲು ಜನಸಾಗರವೇ ಹರಿದು ಬಂದಿತ್ತು. 

ತುಂಗಾರತಿಯಲ್ಲಿ ಭಾಗಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮಣ್ ಸವದಿ, 
ಸದ್ಯಕ್ಕೆ ವಿಜಯನಗರ ಜಿಲ್ಲೆ ಘೋಷಣೆ ಇಲ್ಲ, ಮೊದಲು ಆನಂದ್ ಸಿಂಗ್ ಮೊದಲು ಮಂತ್ರಿ ಆಗ್ಲಿ ಆಮೇಲೆ ವಿಜಯನಗರ ಜಿಲ್ಲೆ ಘೋಷಣೆ ವಿಚಾರ ಮಾಡೋಣ ಎಂದು ಹೇಳಿದರು. 

ಬರುವ ಹಂಪಿ ಉತ್ಸವದ ದಿನದಂದು ವಿಜಯನಗರ ಜಿಲ್ಲೆ ಘೋಷಣೆ ಆಗುತ್ತೆ ಎಂದು ಆನಂದ್ ಸಿಂಗ್ ಭರವಸೆಯಲ್ಲಿದ್ದರು. ಆದರೆ, ಲಕ್ಷ್ಮಣ್ ಸವದಿ ಈ ರೀತಿಯ ಹೇಳಿಕೆ ನೀಡುವ ಮೂಲಕ ಆನಂದ್ ಸಿಂಗ್ ಇಟ್ಟುಕೊಂಡಿದ್ದ ಭರವಸೆ ಹುಸಿಯಾಗಿದ್ದು, ವಿಜಯನಗರ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಬಿಜೆಪಿ ಸರ್ಕಾರ ಕೋಕ್ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT