ಎಂ. ಪಿ. ರೇಣುಕಾಚಾರ್ಯ 
ರಾಜ್ಯ

ಹೊನ್ನಾಳಿ: ಬಸ್ ಚಾಲಕರಾದ ಎಂ. ಪಿ. ರೇಣುಕಾಚಾರ್ಯ!

ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ  ಎಂ. ಪಿ. ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸುತ್ತಮುತ್ತಲ ಹಳ್ಳಿಗಳಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸೌಲಭ್ಯ ಇಂದಿನಿಂದ ಆರಂಭವಾಗಿದ್ದು, ಬಸ್ಸೊಂದನ್ನು ತಾವೇ ಖುದ್ದು ಚಾಲನೆ ಮಾಡಿದ್ದಾರೆ.

ಹೊನ್ನಾಳಿ: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ  ಎಂ. ಪಿ. ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಸುತ್ತಮುತ್ತಲ ಹಳ್ಳಿಗಳಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸೌಲಭ್ಯ ಇಂದಿನಿಂದ ಆರಂಭವಾಗಿದ್ದು, ಬಸ್ಸೊಂದನ್ನು ತಾವೇ ಖುದ್ದು ಚಾಲನೆ ಮಾಡಿದ್ದಾರೆ.

ಹೊನ್ನಾಳಿಯ ಕೆಲ ಹಳ್ಳಿಗಳಿಗೆ ಬಸ್ ಸಂಚಾರ ಸೌಲಭ್ಯದ ಉದ್ಘಾಟನೆಗೆ ಆಗಮಿಸಿದ ರೇಣುಕಾಚಾರ್ಯ, ಚಾಲಕನ ಡ್ರೆಸ್ ಹಾಕಿಕೊಂಡು ಡ್ರೈವರ್ ಸೀಟ್ ನಲ್ಲಿ ಕುಳಿತು ಬಸ್ ಮಾಡಿದ್ದು, ನೆರೆದಿದ್ದ ಜನರು  ರೇಣುಕಾಚಾರ್ಯ ಪರ ಜೈಕಾರ ಮೊಳಗಿಸಿದ್ದಾರೆ.

ಜನರ ಹರ್ಷೋದ್ಘಾರಗಳಿಂದ ಸಂತೋಷಗೊಂಡ ರೇಣುಕಾಚಾರ್ಯ, ಬಸ್ಸನ್ನು ಕೆಲ ದೂರದವರೆಗೂ ಚಾಲನೆ ಮಾಡುವ ಮೂಲಕ ನೆರೆದಿದ್ದವರಲ್ಲಿ ಅಚ್ಚರಿ ಮೂಡಿಸಿದರು. ಹೊನ್ನಾಳಿ ಕ್ಷೇತ್ರದ ಸಮಗ್ರ ಅಭಿವೃದ್ದಿಯೆ ನನ್ನ ಗುರಿ. ಈ ಬಸ್ ಸೌಲಭ್ಯದಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ಸದುಪಯೋಗವಾಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ನಡೆದ ಜಾತ್ರೆ ಮಹೋತ್ಸವಗಳಲ್ಲಿ ನೆರೆದಿದ್ದವರೊಂದಿಗೆ ವಾದ್ಯಗಳ ಸದ್ದಿಗೆ ಡ್ಯಾನ್ಸ್ ಮಾಡಿದ್ದ ರೇಣುಕಾಚಾರ್ಯ ಕೆಲ ದಿನಗಳ ಹಿಂದೆ ಹೋರಿಯಿಂದ ಗುದ್ದಿಸಿಕೊಂಡು ಸುದ್ದಿಯಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT