ಗೋವಿಂದ ಕಾರಜೋಳ 
ರಾಜ್ಯ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್ ರಾಜಕಾರಣ: ಗೋವಿಂದ ಕಾರಜೋಳ

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ತನ್ನ ಮತ ಬ್ಯಾಂಕಿಗಾಗಿ ಅಲ್ಪಸಂಖ್ಯಾತರು, ದೀನದಲಿತರು ಸೇರಿದಂತೆ ಕೆಲ ಸಮುದಾಯಗಳಿಗೆ ತಪ್ಪು ತಿಳುವಳಿಕೆ ಕೊಟ್ಟು ಅವರನ್ನು ಭಯದ ವಾತಾವರಣದಲ್ಲಿಯೇ ಇರುವಂತೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ಗದಗ: ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ತನ್ನ ಮತ ಬ್ಯಾಂಕಿಗಾಗಿ ಅಲ್ಪಸಂಖ್ಯಾತರು, ದೀನದಲಿತರು ಸೇರಿದಂತೆ ಕೆಲ ಸಮುದಾಯಗಳಿಗೆ ತಪ್ಪು ತಿಳುವಳಿಕೆ ಕೊಟ್ಟು ಅವರನ್ನು ಭಯದ ವಾತಾವರಣದಲ್ಲಿಯೇ ಇರುವಂತೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.


ಗದಗಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆ ಜಾರಿಯಿಂದಾಗಿ ದೇಶದ 130 ಕೋಟಿ ಜನರಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ. ವಿಪಕ್ಷಗಳು ವಿನಾಕಾರಣ ಜನರನ್ನು ಹುಯಿಲೆಬ್ಬಿಸುವುದನ್ನು ಬಿಡಬೇಕು ಎಂದು ಮನವಿ ಮಾಡಿದರು.


ಮಹಾದಾಯಿ ವಿಚಾರದಲ್ಲಿ ಗಡಿಬಿಡಿ ಮಾಡಬಾರದು. ವಿವಾದ ನ್ಯಾಯಾಲಯದ ಮುಂದೆ ಇರುವುದರಿಂದ ಯಾರೂ ಆತುರ ಪಡಬಾರದು. ಕೇಂದ್ರದ ಮಂತ್ರಿಗಳೇ ಕರ್ನಾಟಕಕ್ಕೆ ಮಹಾದಾಯಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ