ಸಾಂದರ್ಭಿಕ ಚಿತ್ರ 
ರಾಜ್ಯ

ಆದಾಯ ಹೆಚ್ಚಿಸಿಕೊಂಡ ಚಾಮರಾಜನಗರ ಕೆಎಸ್ಆರ್​ಟಿಸಿ ಉಪ ವಿಭಾಗ

ಚಾಮರಾಜನಗರ ಕೆಎಸ್ಆರ್​ಟಿಸಿ ಉಪವಿಭಾಗವು 2019 ರಲ್ಲಿ ಅಧಿಕ ಲಾಭ ಗಳಿಸಿದೆ. ಚಾಮರಾಜನಗರ ಉಪ ವಿಭಾಗದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ನಂಜನಗೂಡು ಘಟಕಗಳಿಂದ ಪ್ರತಿನಿತ್ಯ 540 ಬಸ್ಸುಗಳು ಕಾರ್ಯಾಚರಿಸುತ್ತಿದ್ದು ಪ್ರತಿದಿನ ಸರಾಸರಿ 50-52 ಲಕ್ಷ ರೂ. ಆದಾಯ ಗಳಿಸುತ್ತಿದೆ. 

ಚಾಮರಾಜನಗರ: ಚಾಮರಾಜನಗರ ಕೆಎಸ್ಆರ್​ಟಿಸಿ ಉಪವಿಭಾಗವು 2019 ರಲ್ಲಿ ಅಧಿಕ ಲಾಭ ಗಳಿಸಿದೆ. ಚಾಮರಾಜನಗರ ಉಪ ವಿಭಾಗದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ನಂಜನಗೂಡು ಘಟಕಗಳಿಂದ ಪ್ರತಿನಿತ್ಯ 540 ಬಸ್ಸುಗಳು ಕಾರ್ಯಾಚರಿಸುತ್ತಿದ್ದು ಪ್ರತಿದಿನ ಸರಾಸರಿ 50-52 ಲಕ್ಷ ರೂ. ಆದಾಯ ಗಳಿಸುತ್ತಿದೆ. 

2019 ರ ಏಪ್ರಿಲ್​ನಿಂದ ಡಿಸೆಂಬರ್​ವರೆಗಿನ ಲೆಕ್ಕಾಚಾರದ ಪ್ರಕಾರ, ಸಂಸ್ಥೆಯು 5 ಕೋಟಿ ರೂ ಹೆಚ್ಚುವರಿ ಆದಾಯ ಗಳಿಸಿದೆ. ಕಳೆದ ಬಾರಿಗೆ ಹೋಲಿಸಿದರೆ 2 ರಿಂದ 2.5 ಕೋಟಿ ರೂ. ಲಾಭಾಂಶದಲ್ಲಿ ಹೆಚ್ಚಳವಾಗಿದೆ ಎಂದು ಚಾಮರಾಜನಗರ ಸಾರಿಗೆ ಸಂಸ್ಥೆ ಉಪವಿಭಾಗಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.

ಚಾಮರಾಜನಗರ ಸಾರಿಗೆ ಸಂಸ್ಥೆ ಉಪವಿಭಾಗಧಿಕಾರಿ ಶ್ರೀನಿವಾಸ್ ಮಾತನಾಡಿ, ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಭಕ್ತರು ಹೆಚ್ಚಾಗಿ ಸಾರಿಗೆ ಸಂಸ್ಥೆ ಬಸ್​ಗಳಲ್ಲೇ ಸಂಚರಿಸುವುದರಿಂದ ಸಂಸ್ಥೆಗೆ ಉತ್ತಮ ಆದಾಯ ಹರಿದು ಬಂದಿದೆ. ಯುಗಾದಿ, ಅಮಾವಾಸ್ಯೆ, ದೀಪಾವಳಿ ಸೇರಿದಂತೆ ವಿಶೇಷ ದಿನಗಳಲ್ಲಿ 200-400 ಹೆಚ್ಚುವರಿ ಬಸ್​ಗಳು ಸಂಚರಿಸುವುದರಿಂದ ಈ ಬಾರಿ 9 ಕೋಟಿ 63 ಲಕ್ಷ ರೂ ಆದಾಯ ಬಂದಿದೆ. ಮಾದಪ್ಪನ ಭಕ್ತರಿಂದಲೇ ಈ ಬಾರಿ ಹೆಚ್ಚುವರಿ ಆದಾಯ ಬಂದಿದೆ ಎಂದು ಮಾಹಿತಿ ನೀಡಿದರು‌.

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿರ್ಬಂಧ ಇರುವುದರಿಂದ ಸಾರಿಗೆ ಸಂಸ್ಥೆ ಬಸ್​ಗಳಿಗೆ ವಾರಾಂತ್ಯದ ದಿನಗಳಲ್ಲಿ ಸರಾಸರಿ ದಿನವೊಂದಕ್ಕೆ 1.80 ಲಕ್ಷ ಆದಾಯ ಬರುತ್ತಿದೆ‌.‌ ಬಿಳಿಗಿರಿರಂಗನನಾಥ ದೇವಾಲಯದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವುದರಿಂದ ಕಳೆದೆರಡು ವರ್ಷಗಳಿಂದ ಆದಾಯ ಸೋರಿಕೆಯಾಗಿದೆ ಎಂದರು.
- ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT