ಸಂಗ್ರಹ ಚಿತ್ರ 
ರಾಜ್ಯ

ಮಡಿಕೇರಿ: ಪತಿಗಾಗಿ ಇಬ್ಬರು ಪತ್ನಿಯರ ಕಿತ್ತಾಟ, ಸವತಿಯ ಕತ್ತು ಕಡಿದು ಪರಾರಿಯಾದ ಮಹಿಳೆ!

ಪತಿಗಾಗಿ ಇಬ್ಬರು ಪತ್ನಿಯರ ನಡುವೆ ಪ್ರಾರಂಭಗೊಂಡ ಕಾದಾತ ಒಬ್ಬಳ ಕೊಲೆಯೊಡನೆ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಬಳಂಜಬೆರೆಯ ಕಾಫಿ ತೋಟದ ಲೈನ್​​​ ಮನೆ ಎಂಬಲ್ಲಿ ನಡೆದಿರುವ ಘಟನೆಯಲ್ಲಿ ವಶಿಕಾ ದೇವಿ (27) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ಮಡಿಕೇರಿ: ಪತಿಗಾಗಿ ಇಬ್ಬರು ಪತ್ನಿಯರ ನಡುವೆ ಪ್ರಾರಂಭಗೊಂಡ ಕಾದಾತ ಒಬ್ಬಳ ಕೊಲೆಯೊಡನೆ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಬಳಂಜಬೆರೆಯ ಕಾಫಿ ತೋಟದ ಲೈನ್​​​ ಮನೆ ಎಂಬಲ್ಲಿ ನಡೆದಿರುವ ಘಟನೆಯಲ್ಲಿ ವಶಿಕಾ ದೇವಿ (27) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ಮೂಲತಃ ಜಾರ್ಖಂಡ್ ನವರಾಗಿದ್ದ ದಯಾನಂದ್‍ನ ಮೊದಲನೇ ಪತ್ನಿ ಆಶಿಕಾ ಗುಪ್ತ ತನ್ನ ಸವತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾಳೆ.

ಘಟನೆ ವಿವರ

ಜಾರ್ಖಂಡ್ ನವರಾದ ದಯಾನಂದ್ ಏಳು ವರ್ಷಗಳ ಹಿಂದೆ ಆಶಿಕಾ ಗುಪ್ತ ಜತೆ ವಿವಾಹವಾಗಿದ್ದ. ಆದರೆ ಅದಾಗಿ ಒಂದು ವರ್ಷದ ನಂತರ  ವಶಿಕಾ ದೇವಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಮೂವರು ಸಹ ಕೊಡಗಿನ ಸಿದ್ದಾಪುರ ಸಮೀಪದ ಕಾಫಿ ಎಸ್ಟೇಟ್ ನಲ್ಲಿ ನಾಲ್ಕು ವರ್ಷಗಳಿಂದ ಕಾರ್ಮಿಕರಾಗಿ ದುಡಿಯುತ್ತಿದ್ದರು. ಇಬ್ಬರು ಪತ್ನಿಯರಲ್ಲಿ ಮೊದಲನೆಯವಳಿಗೆ ಒಂದು, ವಶಿಕಾ ದೇವಿಗೆ ಎರಡು ಮಕ್ಕಳೂ ಇದ್ದವು.

ಆದರೆ ಕೆಲ ದಿನಗಳಿಂದ ಇಬ್ಬರು ಪತ್ನಿಯರ ನಡುವೆ ಸಣ್ಣ ಕಾರಣಕ್ಕಾಗಿ ಜಗಳ ಪ್ರಾರಂಭವಾಗಿದೆ. ಪತಿಯ ವಿಚಾರದಲ್ಲಿ ವಾದ ವ್ವಿವಾದಗಳು ನಡೆಯುತ್ತಿದ್ದವು ಎನ್ನಲಾಗಿದೆ. ಶನಿವಾರ ಕೂಡ ಪತಿಯೊಡನೆ ತೋಟಕ್ಕೆ ತೆರಳಿ ಮನೆಗೆ ಹಿಂತಿರುಗುವ ವೇಳೆ ಇಬ್ಬರ ನಡುವೆ ಜಗಳವಾಗಿದೆ.

ಆಗ ಜಗಳದ ಭರದಲ್ಲಿ ಆಶಿಕಾ ಗುಪ್ತ ತನ್ನ ಸವತಿಯಾಗಿದ್ದ ವಶಿಕಾ ದೇವಿ ಕುತ್ತಿಗೆಯನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿದ್ದಾಳೆ. ತೀವ್ರ ರಕ್ತಸ್ರಾವದಿಂದ ವಶಿಕಾ ದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಪತಿ ದಯಾನಂದ್ ತೋಟದಿಂಡ ಮನೆಗೆ ಹಿಂತಿರುಗಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಘಟನ ಸಂಬಂಧ ಸಿದ್ದಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಶೋಧ ಮುಂದುವರಿದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT