ಸಂಗ್ರಹ ಚಿತ್ರ 
ರಾಜ್ಯ

ರಾಜ್ಯಕ್ಕೆ ಕೊನೆಗೂ 1869 ಕೋಟಿ ರೂಪಾಯಿ ಅತಿವೃಷ್ಟಿ ಪರಿಹಾರ ಬಿಡುಗಡೆ

 ಕಳೆದ ವರ್ಷ ರಾಜ್ಯದಲ್ಲಿ ಉಂಟಾಗಿದ್ದ ಭೀಕರ ನೆರೆ, ಪ್ರವಾಹದಿಂಡ ಆದ ಹಾನಿಗೆ ಸಂಬಂಧಿಸಿ ಕೇಂದ್ರದ ಬಿಜೆಪಿ ಸರ್ಕಾರ 1869.85  ಕೋಟಿ ರು. ಪರಿಹಾರ ಬಿಡುಗಡೆಗೊಳಿಸಿದೆ.

ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ಉಂಟಾಗಿದ್ದ ಭೀಕರ ನೆರೆ, ಪ್ರವಾಹದಿಂಡ ಆದ ಹಾನಿಗೆ ಸಂಬಂಧಿಸಿ ಕೇಂದ್ರದ ಬಿಜೆಪಿ ಸರ್ಕಾರ 1869.85  ಕೋಟಿ ರು. ಪರಿಹಾರ ಬಿಡುಗಡೆಗೊಳಿಸಿದೆ.

ಈ ಹಿಂದೆ ಕಳೆದ ಅಕ್ಟೋಬರ್ ನಲ್ಲಿ ಕೇಂದ್ರದ ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಿಡ್ಂಅ ೧೨೦೦ ಕೋಟಿ ರು. ಪರಿಹಾರ ಬಿಡುಗಡೆಯಾಗಿತ್ತು.ಸೋಮವಾರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ರಾಜ್ಯದ ನೆರೆ ಸಂತ್ರಸ್ಥರಿಗೆ ನೆರವಾಗಲು  ಮತ್ತೆ 1869.85  ಕೋಟಿ ರು ನೀಡಲು ತೀರ್ಮಾನಿಸಲಾಗಿದೆ.

ಇನ್ನು ಕರ್ನಾಟಕ ಮಾತ್ರವಲ್ಲದೆ ದೇಶದ ಒಟ್ಟೂ ಏಳು ರಾಜ್ಯಗಳಿಗೆ 5908.56 ಕೋಟಿ ರು. ಪರಿಹಾರದ ಹಣ ಬಿಡುಗಡೆಯಾಗಿದೆ.

ಕೇಂದ್ರದ ಮೋದಿ ಸರ್ಕಾರ ಕರ್ನಾಟಕವನ್ನು ಕಡೆಗಣಿಸುತ್ತಿದೆ, ಯಡಿಯೂರಪ್ಪ ಅವರ ಮಾತಿಗೆ ಮೋದಿ, ಶಾ ಅವರ ಬಳಿ ಗೌರವವಿಲ್ಲ ಎಂದೆಲ್ಲಾ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿದ್ದವು. ಅಲ್ಲದೆ ಇತೇ ನಾಲ್ಕು ದಿನಗಳ ಹಿಂದೆ ತುಮಕೂರು-ಬೆಂಗಳೂರಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇದಿಕೆಯಲ್ಲೇ ಯಡಿಯೂರಪ್ಪ ರಾಜ್ಯವು ಸಂಕಷ್ಟದಲ್ಲಿದ್ದು ಐವತ್ತು ಸಾವಿರ ಕೋಟಿ ನೆರವು ಬೇಕೆಂದು ಬಹಿರಂಗವಾಗಿ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

SCROLL FOR NEXT