ರಾಜ್ಯ

ಎರಡು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

Lingaraj Badiger

ಬೆಂಗಳೂರು: ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರು ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು.

ನಗರದ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಅವರನ್ನು ಉಪ ಮುಖ್ಯಮಂತ್ರಿ ಡಾ: ಸಿ. ಎನ್. ಅಶ್ವಥ್‍ ನಾರಾಯಣ ಆತ್ಮೀಯವಾಗಿ ಬರಮಾಡಿಕೊಂಡರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸದಸ್ಯ ಪಿ. ಸಿ. ಮೋಹನ್, ಬೆಂಗಳೂರು ಮಹಾಪೌರರಾದ ಗೌತಮ್‍ಕುಮಾರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರರಾವ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಉಪ ರಾಷ್ಟ್ರಪತಿ ಅವರು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಬೆಳಗ್ಗೆ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರ ಬೃಂದಾವನ ಭೇಟಿ, ಅದಮ್ಯ ಚೇತನ ಹಸಿರು ಅಡುಗೆ ಮನೆಗೆ ಭೇಟಿ ಕೊಡಲಿದ್ದಾರೆ.

ರಾಜಭವನದಲ್ಲಿ ಹಮ್ಮಿಕೊಂಡಿರುವ “ನ್ಯಾಕ್ ” ಬೆಳ್ಳಿಹಬ್ಬ ನಂತರ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಮ್ಮಿಕೊಂಡಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

SCROLL FOR NEXT