ರಾಜ್ಯ

ಬೆಂಗಳೂರು: ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ, ಚಿಕಿತ್ಸೆ ಫಲಿಸದೆ ಎಎಸ್ಐ ಸಾವು

Lingaraj Badiger

ಬೆಂಗಳೂರು: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

ಚನ್ನಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಆಗಿದ್ದ ಮಲ್ಲೇಶಯ್ಯ ಮೃತಪಟ್ಟವರು.

ಕಳೆದ ಶುಕ್ರವಾರ ರಾತ್ರಿ ಕರ್ತವ್ಯಕ್ಕಾಗಿ ಠಾಣೆಗೆ ತಮ್ಮ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಲ್ಲೇಶಯ್ಯ ಅವರು ಮಂಗಳವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ‌ ಮುಂದುವರಿಸಿದ್ದಾರೆ.

SCROLL FOR NEXT