ಮಲ್ಲೇಶಯ್ಯ 
ರಾಜ್ಯ

ಬೆಂಗಳೂರು: ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ, ಚಿಕಿತ್ಸೆ ಫಲಿಸದೆ ಎಎಸ್ಐ ಸಾವು

ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

ಬೆಂಗಳೂರು: ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

ಚನ್ನಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಆಗಿದ್ದ ಮಲ್ಲೇಶಯ್ಯ ಮೃತಪಟ್ಟವರು.

ಕಳೆದ ಶುಕ್ರವಾರ ರಾತ್ರಿ ಕರ್ತವ್ಯಕ್ಕಾಗಿ ಠಾಣೆಗೆ ತಮ್ಮ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮಲ್ಲೇಶಯ್ಯ ಅವರು ಮಂಗಳವಾರ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ‌ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT