ಬಂಧಿತ ಆರೋಪಿ 
ರಾಜ್ಯ

ಅತ್ಯಾಚಾರದ ವಿಡಿಯೋ ಮಾಡಿ ಮತಾಂತರಕ್ಕೆ ಯತ್ನ: ಬೆಂಗಳೂರಿನಲ್ಲಿ ಓರ್ವನ ಬಂಧನ

ಕೇರಳದ ಕಾಸರಗೋಡು ಜಿಲ್ಲೆಯ ಮೊರ್ಗಾಲ್‌ ಪುತ್ತೂರು ಗ್ರಾಮದ ಹಿಂದೂ ಯುವತಿ ಹಾಗೂ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು:  ಕೇರಳದ ಕಾಸರಗೋಡು ಜಿಲ್ಲೆಯ ಮೊರ್ಗಾಲ್‌ ಪುತ್ತೂರು ಗ್ರಾಮದ ಹಿಂದೂ ಯುವತಿ ಹಾಗೂ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ರಿಷಬ್, ಅನ್ಸರ್  ಬಂಧಿತ ಆರೋಪಿ.  ರಿಷಬ್ ಯುವತಿಯನ್ನು ಬೆಂಗಳೂರಿಗೆ ಕರೆತಂದು ಸ್ನೇಹದ ಸೋಗಿನಲ್ಲಿ ಮತ್ತು ಬರಿಸುವ ಪಾನೀಯವನ್ನು ಯುವತಿಗೆ ಕುಡಿಸಿದ್ದ. ನಂತರ ಈಕೆಯ ಮೇಲೆ ಅತ್ಯಾಚಾರ ನಡೆಸಿದ್ದ.  ಅಲ್ಲದೆ, ಅತ್ಯಾಚಾರ ನಡೆಸಿದ್ದನ್ನು ಚಿತ್ರೀಕರಣ ಮಾಡಲಾಗಿತ್ತು. 

ಇದೇ ವಿಡಿಯೋ ಇಟ್ಟುಕೊಂಡು ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಅತ್ಯಾಚಾರಿ ಒತ್ತಡ ಹೇರುತ್ತಿದ್ದ. ಒಂದೊಮ್ಮೆ ಮತಾಂತರಗೊಳ್ಳದಿದ್ದರೆ ವಿಡಿಯೋ ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ್ದ.

ರಿಷಬ್​ ಬೆಂಗಳೂರಿಗೆ ಬಂದಾಗ ಆತನಿಗೆ ಉಳಿಯಲು ಅನ್ಸರ್ ​ ತನ್ನ ಮನೆಯಲ್ಲೇ ಜಾಗ ಕೊಟ್ಟಿದ್ದ. ಮೂರು ದಿನಗಳಕಾಲ ರಿಷಬ್​ ಯುವತಿಯನ್ನು ಇಲ್ಲಿಯೇ ಇಟ್ಟುಕೊಂಡಿದ್ದ. ಈ ವೇಳೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅನ್ಸರ್​ನನ್ನು ಬಂಧಿಸಲಾಗಿದ್ದು, ರಿಷಬ್ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಈ ಬಗ್ಗೆ ಕಾಸರಗೋಡಿನಲ್ಲಿ ದೂರು ನೀಡಿದ್ದರೂ ಕೇರಳ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ಅತ್ಯಾಚಾರವೆಸಗಿ ಮತಾಂತರಕ್ಕೆ ಒತ್ತಡ ಹೇರಿದ ಯುವಕರು ಬೆಂಗಳೂರಿನಲ್ಲಿ ನೆಲೆಸಿರುವ ಕಾರಣ ಸಂತ್ರಸ್ತ ಯುವತಿ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ್ದರು. 

ಈ ಸಂಬಂಧ ಸಂತ್ರಸ್ತೆ ಜೊತೆ ತೆರಳಿ ಪೊಲೀಸ್ ಕಮಿಷನರ್​ಗೆ ಶೋಭಾ ಕರಂದ್ಲಾಜೆ ದೂರು ನೀಡಿದ್ದರು. ದೂರು ಆಧಿರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT