ಸದ್ಗುರು ಜಗ್ಗಿ ವಾಸುದೇವ 
ರಾಜ್ಯ

ಕಾವೇರಿ ಕೂಗು ಅಭಿಯಾನ: ಯಾವ ಅಧಿಕಾರದ ಮೇಲೆ ಹಣ ಸಂಗ್ರಹಿಸುತ್ತಿದ್ದೀರಿ? ಈಶಾ ಫೌಂಡೇಷನ್ ಗೆ ಹೈಕೋರ್ಟ್‌ ಚಾಟಿ

‘ಕಾವೇರಿ ಕೂಗು’ ಅಭಿಯಾನದ ಹೆಸರಲ್ಲಿ ಇಲ್ಲಿಯವರೆಗೆ ಸಾರ್ವಜನಿಕರಿಂದ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂದು ಸದ್ಗುರು ಜಗ್ಗಿ ವಾಸುದೇವ್ ಅವರ ಈಶಾ ಫೌಂಡೇಷನ್ ಅನ್ನು ಹೈಕೋರ್ಟ್ ಪ್ರಶ್ನಿಸಿದೆ.

ಬೆಂಗಳೂರು: ‘ಕಾವೇರಿ ಕೂಗು’ ಅಭಿಯಾನದ ಹೆಸರಲ್ಲಿ ಇಲ್ಲಿಯವರೆಗೆ ಸಾರ್ವಜನಿಕರಿಂದ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂದು ಸದ್ಗುರು ಜಗ್ಗಿ ವಾಸುದೇವ್ ಅವರ ಈಶಾ ಫೌಂಡೇಷನ್ ಅನ್ನು ಹೈಕೋರ್ಟ್ ಪ್ರಶ್ನಿಸಿದೆ.

ಈ ಕುರಿತು ವಕೀಲ ಎ.ವಿ. ಅಮರನಾಥನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ವಿಭಾಗೀಯ ಪೀಠ,  ‘ಕಾವೇರಿ ಕೂಗು’ ಅಭಿಯಾನದ ಹೆಸರಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿರುವ ಈಶಾ ಫೌಂಡೇಷನ್‌ಗೆ ಚಾಟಿ ಬೀಸಿದೆ.

ಫೌಂಡೇಷನ್‌ ಈವರೆಗೆ ಯಾವ ವಿಧಾನದಿಂದ ಎಷ್ಟು ಹಣ ಸಂಗ್ರಹ ಮಾಡಿದೆ ಎಂಬ ಬಗ್ಗೆ ಮಾಹಿತಿ ಒದಗಿಸುವಂತೆಯೂ ಹೈಕೋರ್ಟ್ ನಿರ್ದೇಶನ ನೀಡಿದೆ. ಇತ್ತ ರಾಜ್ಯ ಸರ್ಕಾರ, ತಾನು ಹಣ ಸಂಗ್ರಹಿಸಲು ಯಾವುದೇ ಸಂಸ್ಥೆಗಳಿಗೆ ಅನುಮತಿ ಕೊಟ್ಟಿಲ್ಲ ಎಂದು ಪ್ರಮಾಣ ಪತ್ರವನ್ನೂ ಹೈಕೋರ್ಟ್‌ಗೆ ಸಲ್ಲಿಸಿದೆ.

‘ಲಾಭರಹಿತ ಆಧ್ಯಾತ್ಮಿಕ ಸಂಸ್ಥೆ ಎಂದು ಹೇಳುತ್ತೀರಿ. ಹಾಗಿದ್ದರೆ ಹಣ ಏಕೆ ಸಂಗ್ರಹ ಮಾಡುತ್ತೀರಿ? ಯಾವ ಅಧಿಕಾರದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿದ್ದೀರಿ? ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ಸಂಸ್ಥೆಗೆ ಸೇರಿಸಿಕೊಂಡಿದ್ದೀರಲ್ಲಾ, ಅವರನ್ನು ನೇಮಕ ಮಾಡಿದ್ದು ಯಾರು? ನೀವು ಹಣ ಸಂಗ್ರಹ ಮಾಡುತ್ತಿರುವ ವಿಚಾರ ಆ ನ್ಯಾಯಮೂರ್ತಿಗಳಿಗೆ ಗೊತ್ತಿದೆಯೇ?’ ಎಂದು ಫೌಂಡೇಷನ್‌ ಪರ ವಕೀಲರನ್ನು ಕೋರ್ಟ್‌ ಪ್ರಶ್ನಿಸಿತು.

ಇನ್ನು ಹೈಕೋರ್ಟ್‌ ಪ್ರಶ್ನೆಗೆ ಉತ್ತರಿಸಿದ ಫೌಂಡೇಷನ್ ಪರ ವಕೀಲರು, ‘ನದಿ ಪುನಶ್ಚೇತನ ಹಾಗೂ ಪರಿಸರದ ಬಗ್ಗೆ ರೈತರಲ್ಲಿ ಅರಿವು ಮೂಡಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಿಂದ ಬಲವಂತವಾಗಿ ಹಣ ಸಂಗ್ರಹ ಮಾಡುತ್ತಿಲ್ಲ, ಜನರೇ ಸ್ವಯಂಪ್ರೇರಣೆಯಿಂದ ದೇಣಿಗೆ ನೀಡುತ್ತಿದ್ದಾರೆ’ ಎಂದು ಸಮಜಾಯಿಷಿ ನೀಡಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT