ರಾಜ್ಯ

ಎಂ ಎಂ ಹಿಲ್ಸ್ ರಸ್ತೆಯಲ್ಲಿ ವಾಹನ ನಿಲ್ಲಿಸುವವರಿಗೆ ಸ್ಥಳದಲ್ಲೇ ದಂಡ: ಅರಣ್ಯ ಇಲಾಖೆ ಬಿಗಿ ಕ್ರಮ

ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮ ಉಲ್ಲಂಘಿಸುವವರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಸಾಗುವ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸುವುದರ ಮೂಲಕ ನಿಯಮ ಉಲ್ಲಂಘಿಸುವವರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಬಿಗಿ ಕ್ರಮವನ್ನು ಅರಣ್ಯ ಇಲಾಖೆ ತೆಗೆದುಕೊಂಡಿದೆ ಎಂದು ಅರಣ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


ಎಚ್ಚರಿಕೆಯ ಫಲಕಗಳನ್ನು ಹಾಕಲಾಗಿದ್ದರೂ, ವಾಹನಗಳಲ್ಲಿ ತೆರಳುವ ಜನರು ರಸ್ತೆಯಲ್ಲೇ ವಾಹನ ನಿಲ್ಲಿಸಿ ವನ್ಯ ಜೀವಿಗಳ ಚಿತ್ರಗಳನ್ನು ತೆಗೆಯುವುದು, ಸೆಲ್ಫಿಗಳನ್ನು ತೆಗೆಯುವುದನ್ನು ಮುಂದುವರೆಸುವುದರ ಮೂಲಕ ನಿಯಮಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.


ರಸ್ತೆ ಅಪಘಾತಗಳನ್ನು ತಡೆಯಲು ಮತ್ತು ವನ್ಯಜೀವಿಗಳ ಮೇಲಿನ ದಾಳಿಗಳನ್ನು ತಡೆಯುವ ಪ್ರಯತ್ನವಾಗಿ ಅರಣ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದೆ. ಇದು ಜ 1ರಿಂದ ಜಾರಿಗೆ ಬರಲಿದ್ದು, ಗಸ್ತು ತೀವ್ರಗೊಳಿಸಲಾಗಿದೆ ಎಂದು ಮಲೆ ಮಹದೇಶ್ವರ ಬೆಟ್ಟ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕೊಂಡಲು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್