ಸಿಎಂ ಯಡಿಯೂರಪ್ಪ 
ರಾಜ್ಯ

ವಾಲ್ಮೀಕಿ ಸಮುದಾಯದ ಬೇಡಿಕೆ ಈಡೇರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ 

ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಬುಡಕಟ್ಟು ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 3ರಿಂದ ಶೇಕಡಾ 7.5ಕ್ಕೆ ಏರಿಸಬೇಕೆಂಬ ವಾಲ್ಮೀಕ ಸಮುದಾಯದ ನಾಯಕರ ಬೇಡಿಕೆಯನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

'ಬೆಂಗಳೂರು: ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಬುಡಕಟ್ಟು ಮೀಸಲಾತಿ ಕೋಟಾವನ್ನು ಈಗಿರುವ ಶೇಕಡಾ 3ರಿಂದ ಶೇಕಡಾ 7.5ಕ್ಕೆ ಏರಿಸಬೇಕೆಂಬ ವಾಲ್ಮೀಕ ಸಮುದಾಯದ ನಾಯಕರ ಬೇಡಿಕೆಯನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.


ವಾಲ್ಮೀಕಿ ಸಮುದಾಯದ ಏಳಿಗೆಗೆ ಬಿಜೆಪಿ ಸರ್ಕಾರ ಬದ್ಧವಾಗಿದ್ದು ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿಯಂತೆ ಪರಿಗಣಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆಯೋಗದ ವರದಿಯನ್ನು ಪರಿಶೀಲಿಸಲು ಎಲ್ಲಾ ಇಲಾಖೆಗಳಿಗೆ 6 ತಿಂಗಳ ಕಾಲಾವಕಾಶವನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಅವರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. 


ಇತ್ತೀಚೆಗೆ ವಾಲ್ಮೀಕಿ ಸಮುದಾಯದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿ ಅವರು ಆರೋಗ್ಯ ಸಚಿವ ಶ್ರೀರಾಮುಲು, ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ, ಬಿಜೆಪಿಯ ರಮೇಶ್ ಜಾರಕಿಹೊಳಿ ಅವರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು.


ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಭರವಸೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಆಯೋಗ ವರದಿ ಸಲ್ಲಿಸಿದ ಕೂಡಲೇ ಸರ್ಕಾರ ಅದನ್ನು ಗಮನಿಸಿ ಅಗತ್ಯ ಕ್ರಮ ಕೈಗೊಳ್ಳಲು ತ್ವರಿತ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ