ರಾಜ್ಯ

ಕಾಸರಗೋಡು ಯುವತಿಯ ಮೇಲೆ ಅತ್ಯಾಚಾರ ಪ್ರಕರಣ: ತನಿಖೆ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Raghavendra Adiga

ಬೆಂಗಳೂರು: ಕೇರಳದಿಂದ ಯುವತಿಯೊಬ್ಬರನ್ನು ನಗರಕ್ಕೆ ಕರೆತಂದು ಅತ್ಯಾಚಾರವೆಸಗಿ ಬೆದರಿಸಿ ಮತಾಂತರಕ್ಕೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.

ಸಂತ್ರಸ್ತ ಯುವತಿಯು ನೀಡಿದ ದೂರಿನನ್ವಯ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿದ್ದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. 

SCROLL FOR NEXT