ಸಾಂದರ್ಭಿಕ ಚಿತ್ರ 
ರಾಜ್ಯ

ಶೇ.16 ಮೀಸಲಾತಿಗೆ ಮನವಿ: ವೀರಶೈವ-ಲಿಂಗಾಯತ ಮೀಸಲಾತಿ ಹೋರಾಟ ಸಮಿತಿ ನಿರ್ಧಾರ

ವೀರಶೈವರು ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ `ಮರಾಠ ಮೀಸಲಾತಿ' ಮಾದರಿಯಲ್ಲಿ ಶೇ.16 ರಷ್ಟು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಮುಂದಾಗಿದೆ.

ಬೆಂಗಳೂರು: ವೀರಶೈವರು ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಮಹಾರಾಷ್ಟ್ರ `ಮರಾಠ ಮೀಸಲಾತಿ' ಮಾದರಿಯಲ್ಲಿ ಶೇ.16 ರಷ್ಟು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಮುಂದಾಗಿದೆ.

ಮಿಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂ ಕೋರ್ಟ್ 1992 ರಲ್ಲಿಯೇ ಆದೇಶ ಹೊರಡಿಸಿದೆ. ಆದರೆ, ರಾಜ್ಯ ಸರ್ಕಾರಗಳಿಗೆ ಯಾವುದೇ ಸಮುದಾಯ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಮನವರಿಕೆಯಾದರೆ, ಅಂತಹ ಸಮುದಾಯಕ್ಕೆ ವಿಶೇಷ ಮೀಸಲಾತಿ ನೀಡಲು ಅವಕಾಶವಿದೆ. ಹೀಗಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೇಡಿಕೆ ಇಟ್ಟಿದ್ದ ವೀರಶೈವ ಲಿಂಗಾಯತ ಸಮುದಾಯ ಈಗ ಶೇ.16 ರಷ್ಟು ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ.

ತಮಿಳುನಾಡು, ಹರ್ಯಾಣ, ಜಾರ್ಖಂಡ್ ಹಾಗೂ ಮಹಾರಾಷ್ಟ್ರ ರಾಜ್ಯಗಳು ಸ್ಥಳೀಯವಾಗಿ ಹಿಂದುಳಿದ ಸಮುದಾಯಗಳಿಗೆ ಶೇ.10 ರಿಂದ 16 ವರೆಗೂ ಮೀಸಲಾತಿ ನೀಡಿವೆ.

ಈಗ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಪರಿಗಣಿಸಿ ಶೇ.16 ರಷ್ಟು ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಸಮಸ್ತ ಲಿಂಗಾಯತ ಮೀಸಲಾತಿ ಹೋರಾಟ ಸಮಿತಿ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT