ಶಾಸಕ ಆನಂದ್ ಸಿಂಗ್ 
ರಾಜ್ಯ

ಹೊಸಪೇಟೆ: ಸಿಎಎ ಜಾಗೃತಿ ಅಭಿಯಾನದಲ್ಲಿ ಆನಂದ್ ಸಿಂಗ್ ಗೆ ಮುಖಭಂಗ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತ ಜಾಗೃತಿ ಅಭಿಯಾನದಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅಲ್ಲಲ್ಲಿ ಮುಖಭಂಗ ಅನುಭವಿಸುವಂತಾಯಿತು.

ಹೊಸಪೇಟೆ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತ ಜಾಗೃತಿ ಅಭಿಯಾನದಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಅಲ್ಲಲ್ಲಿ ಮುಖಭಂಗ ಅನುಭವಿಸುವಂತಾಯಿತು.

ಎಸ್ ಆರ್ ನಗರ ಹಾಗೂ ಛಲವಾದಿಕೇರಿಯಲ್ಲಿ ಆನಂದ್ ಸಿಂಗ್ ನೇತೃತ್ವದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಜನರಿಂದ ತೀವ್ರ  ವಿರೋಧ ವ್ಯಕ್ತವಾಯಿತು.

ಬಾರಿ ಪೊಲೀಸ್ ಭದ್ರತೆಯಲ್ಲಿ ಎಸ್.ಆರ್.ನಗರದಲ್ಲಿ ಜಾಗೃತಿ ಅಭಿಯಾನ ಪ್ರಾರಂಭಿಸಿದ  ಆನಂದ್ ಸಿಂಗ್ ಗೆ ಕಾಯ್ದೆ ಬಗ್ಗೆ ನಮಗೆಲ್ಲ ಗೊತ್ತಿದೆ ಮುಂದೆ ಹೋಗು ಎಂದು ಅಲ್ಲಿನ ನಿವಾಸಿಗಳು ನೇರವಾಗಿಯೇ ಹೇಳಿದರು. ಎಸ್.ಆರ್ ನಗರದ ಬಹುತೇಕ ಮನೆಗಳ ಬಾಗಿಲು ಬಂದ್ ಮಾಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದರು.

ಎಸ್ ಆರ್ ನಗರದ ಜನಸಾಮಾನ್ಯರೆಲ್ಲರೂ ಒಟ್ಟಿಗೆ ಸೇರಿ ಜಾಗೃತಿ ಅಭಿಯಾನವನ್ನು ಧಿಕ್ಕರಿಸಿದರು.ಆನಂದ್ ಸಿಂಗ್ ಕೈಯಲ್ಲಿದ್ದ ಒಂದೇ ಒಂದು ಕರ ಪತ್ರ ಪಡೆಯದೆ ಸಾಮೂಹಿಕವಾಗಿ ಕಾಯ್ದೆ ಜಾರಿಗೆ ಆಕ್ರೋಶ ವ್ಯಕ್ತಪಡಿಸಿದರು.ಬೆರಳೆಣಿಕೆಯಷ್ಟು ಜನಗಳು ಮಾತ್ರ ಜಾಗೃತಿ ಅಭಿಯಾನದ ಕರ ಪತ್ರ ಪಡೆದು ಆನಂದ್ ಸಿಂಗ್ ಅವರನ್ನು ವಾಪಾಸ್ ಕಳುಹಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT