ಬಿಬಿಎಂಪಿ ಮತ್ತು ನಿಸಾರ್ ಅಹ್ಮದ್ 
ರಾಜ್ಯ

ಖ್ಯಾತ ಕವಿ ನಿಸ್ಸಾರ್ ಅಹಮದ್ ಪುತ್ರನ ಚಿಕಿತ್ಸೆಗೆ ಪಾಲಿಕೆಯಿಂದ 10 ಲಕ್ಷ ರೂ. ನೆರವು

ಅನಾರೋಗ್ಯದಿಂದ ಬನ್ನೇರುಘಟ್ಟ ಮುಖ್ಯರಸ್ತೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ ರವರ ಪುತ್ರ ನವೀದ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ 10 ಲಕ್ಷ ರೂ. ನೆರವು ನೀಡಲಾಯಿತು.

ಬೆಂಗಳೂರು: ಅನಾರೋಗ್ಯದಿಂದ ಬನ್ನೇರುಘಟ್ಟ ಮುಖ್ಯರಸ್ತೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಿತ್ಯೋತ್ಸವ ಕವಿ ಪ್ರೊ. ನಿಸ್ಸಾರ್ ಅಹಮದ್ ರವರ ಪುತ್ರ ನವೀದ್ ಅವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ 10 ಲಕ್ಷ ರೂ. ನೆರವು ನೀಡಲಾಯಿತು.

ಮೇಯರ್‌ ವೈದ್ಯಕೀಯ ಪರಿಹಾರ ನಿಧಿಗೆ 15 ಕೋಟಿ ರೂ. ಮೀಸಲಿಡಲು ಮಂಗಳವಾರ ನಡೆದ ಪಾಲಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಜತೆಗೆ, ಅನಾರೋಗ್ಯಕ್ಕೆ ತುತ್ತಾಗಿರುವ ನಿತ್ಯೋತ್ಸವ ಕವಿ ನಿಸ್ಸಾರ್‌ ಅಹಮದ್‌ ಹಾಗೂ ಅವರ ಪುತ್ರ ನವೀದ್‌ ನಿಸ್ಸಾರ್‌ ಅವರ ಚಿಕಿತ್ಸೆಗೆ ಪಾಲಿಕೆಯಿಂದ 20 ಲಕ್ಷ ರೂ. ಆರ್ಥಿಕ ನೆರವು ನೀಡಲು ಅಂಗೀಕಾರ ನೀಡಲಾಯಿತು. ಮಹಾಪೌರರಾದ ಗೌತಮ್ ಕುಮಾರ್ ಅವರು ಬುಧವಾರ ಈ ಹಣದ ಚೆಕ್ ಹಸ್ತಾಂತರಿಸಿದರು. ಉಪಮಹಾಪೌರರಾದ ರಾಮ ಮೋಹನ ರಾಜು, ಪಾಲಿಕೆ ಸದಸ್ಯ ಎಲ್.ಶ್ರೀನಿವಾಸ್ ಉಪಸ್ಥಿತರಿದ್ದರು.

ಮಂಗಳವಾರ ನಡೆದ ಪಾಲಿಕೆ ಸಭೆಯಲ್ಲಿ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್‌ ಪ್ರಸ್ತಾವನೆ ಮಂಡಿಸಿ ಒಪ್ಪಿಗೆ ಪಡೆದರು. ಮೇಯರ್‌ ವೈದ್ಯಕೀಯ ನೆರವು ನಿಧಿಯಿಂದ ಪರಿಹಾರ ಬಯಸಿ ಕಳೆದ ಮೂರು ತಿಂಗಳಿಂದ ನೂರಾರು ಅರ್ಜಿಗಳು ಬಂದಿದ್ದು, ವೈದ್ಯಕೀಯ ನಿಧಿ ಖಾಲಿ ಆಗಿರುವುದರಿಂದ ಸೌಲಭ್ಯ ಸಿಗುತ್ತಿರಲಿಲ್ಲ ಹಾಗೂ 3 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್, ಅಮೆರಿಕ ಮತ್ತೊಂದು ವೈಮಾನಿಕ ದಾಳಿ

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್