ರೇವಾ ವಿವಿ ಕುಲಾಧಿಪತಿ ಡಾ. ಪಿ.ಶ್ಯಾಮರಾಜು ಕಾರ್ಯಕ್ರಮ ಉದ್ಘಾಟಿಸಿದರು 
ರಾಜ್ಯ

ರೇವಾ ವಿವಿ ಸಂಸ್ಥಾಪಕರ ದಿನಾಚರಣೆ: ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ

ರೇವಾ ವಿಶ್ವವಿದ್ಯಾಲಯದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ಜನವರಿ, 6 ರಂದು ರೇವಾ ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಂಗಳೂರು: ರೇವಾ ವಿಶ್ವವಿದ್ಯಾಲಯದ ಸಂಸ್ಥಾಪಕರ ದಿನಾಚರಣೆಯನ್ನು ಇದೇ 2020ನೇ ಜನವರಿ, 6 ರಂದು ರೇವಾ ಕ್ಯಾಂಪಸ್‍ನಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಪ್ರತಿವರ್ಷದಂತೆ ಈ ವರ್ಷವೂ ರೇವಾ ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಾಲಿನ ಪ್ರಶಸ್ತಿ ವಿಜೇತರು ಪದ್ಮವಿಭೂಷಣ ಪ್ರಶಸ್ತಿ ವಿಜೇತರಾದ ಡಾ. ಕೆ. ಕಸ್ತೂರಿ ರಂಗನ್, ಕುಲಾಧಿಪತಿಗಳು, ಸೆಂಟ್ರಲ್ ವಿಶ್ವವಿದ್ಯಾಲಯ, ರಾಜಸ್ತಾನ, ಚೇರ್ಮನ್ (ಮಾಜಿ) ಇಸ್ರೋ ಮತ್ತು ಶ್ರೀಯುತ ಕೆ. ರಾಘವೇಂದ್ರರಾವ್, ಪ್ರಖ್ಯಾತ ಭಾರತೀಯ ಸಿನಿಮಾ ನಿರ್ದೇಶಕರು, ಕಥಾಸಂಕಲನಕಾರರು, ನಿರ್ಮಾಪಕರಿಗೆ ನೀಡಲಾಯಿತು, ಹಾಗೆಯೇ ರೇವಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ಡಾ. ಸತೀಶ್ ರೆಡ್ಡಿ, ವೈಜ್ಞಾನಿಕ ಸಲಹೆಗಾರರು, ರಕ್ಷಣಾ ಮಂತ್ರಿ, ಭಾರತ ಸರ್ಕಾರ, ಆಖಆಔ ಚೇರ್ಮನ್, ನವದೆಹಲಿ ಅವರಿಗೆ ನೀಡಲಾಯಿತು.

ಜೀವಮಾನ ಶ್ರೇಷ್ಟ ಪ್ರಶಸ್ತಿಯನ್ನು ಪಡೆದಿರುವ ಡಾ. ಕೆ. ಕಸ್ತೂರಿ ರಂಗನ್ ರವರು ಪ್ರಶಸ್ತಿಯನ್ನು ಸ್ವೀಕರಿಸಿ, ವಿಶ್ವವಿದ್ಯಾಲಯದ ಪ್ರಗತಿಯ ಬಗ್ಗೆ ಬಹಳ ಸಂತೋಷ ವ್ಯಕ್ತಪಡಿಸಿದರು, ಇಲ್ಲಿರುವ ವ್ಯವಸ್ಥಾಪಕರು, ಬೋದಕ, ಭೋಧಕೇತರ ಹಾಗೂ ವಿದ್ಯಾರ್ಥಿಗಳ ಕೊಡುಗೆಯನ್ನು ಪ್ರಶಂಸಿದರು, ಅವರು ಮಾತನಾಡುತ್ತಾ ಸಂಶೋಧನೆ ಬಗ್ಗೆ ಬಹಳ ಒತ್ತು ಕೊಡಬೇಕು ಮತ್ತು ಅದರಿಂದ ನಮ್ಮ ರಾಷ್ಟ್ರದ ಆರ್ಥಿಕ ಅಭಿವೃದ್ದಿಗೆ ಶ್ರಮಿಸಬೇಕೆಂದು ಎಲ್ಲರಿಗೂ ಸಂದೇಶ ನೀಡಿದರು.

ಹಾಗೆಯೇ ಶ್ರೀ. ರಾಘವೇಂದ್ರರಾವ್ ತಮ್ಮ 50 ವರ್ಷದ ಸಿನಿಮಾ ರಂಗದ ಪಯಣದ ಅನುಭವವನ್ನು ಹಂಚಿಕೊಂಡರು, ಯುವಕು ನಮ್ಮ ದೇಶ್ ಪ್ರಗತಿಗಾಗಿ ತಮ್ಮನ್ನು ತಾವು ಸಮರ್ಪಣಾಭಾವದಿಂದ ತೊಡಗಿಸಿಕೊಳ್ಳಬೇಕೆಂದು, ತಮ್ಮ ತಾಯ್ನಾಡಿನ ಬಗ್ಗೆ ಹೆಮ್ಮ ಮತ್ತು ಗರ್ವವಿರಬೇಕೆಂದು ತಿಳಿಸಿದರು.

ಶ್ರೀಯುತ ಡಾ. ಸತೀಶ್‍ರೆಡ್ಡಿರವರ ಪರವಾಗಿ ಡಾ.ಸುಧೀರ್ ಕಾಮತ್‍ರವರು ರೇವಾ ಎಕ್ಸಲೆನ್ಸ್ ಪ್ರಶಸ್ತಿಯನ್ನು ಸ್ವೀಕರಿಸಿ, ರೇವಾ ವಿಶ್ವವಿದ್ಯಾಲಯಕ್ಕೆ ಶುಭಕೋರಿ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ರೇವಾ ಮಾಡುತ್ತಿರುವ ಸಂಶೋಧನೆಯನ್ನು ಪ್ರಶಂಸಿದರು.

"ಸಂಸ್ಥಾಪಕರ ದಿನಾಚರಣೆ"ಯ ಅಧ್ಯಕ್ಷತೆ ವಹಿಸಿದ್ದ ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶ್ರೀಯುತ ಡಾ. ಪಿ. ಶ್ಯಾಮರಾಜುರವರು ಮಾತನಾಡುತ್ತಾ "ಕಲಿಕೆ ನಿರಂತರವಾದದ್ದು, ನಾವು ಕಲಿಯುವುದು ಬಹಳವಿದೆ. ರೇವಾ ಈ ಹಂತಕ್ಕೆ ಬರುವುದಕ್ಕೆ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳೇ ಕಾರಣ" ಎಂದು ಶ್ಲಾಘಿಸಿದರು. ಈ ದಿನವು ರೇವಾ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ. ಪಿ.ಶ್ಯಾಮರಾಜು ರವರ ಹುಟ್ಟುಹಬ್ಬದ ದಿನವೂ ಆಗಿರುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT