ಹಂಪಿ ಉತ್ಸವ 
ರಾಜ್ಯ

ಹಂಪಿ ಉತ್ಸವಕ್ಕೆ ಕ್ಷಣಗಣನೆ: ಮದುವಣಗಿತ್ತಿಯಂತೆ ಸಿಂಗಾರ ಗೊಂಡಿದೆ ವಿಶ್ವ ವಿಖ್ಯಾತ ಹಂಪಿ

ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯುವ ಹಂಪಿ ಉತ್ಸವಕ್ಕೆ ಮದುವಣಗಿತ್ತಿಯಂತೆ ಸಿಂಗಾರ ಗೊಂಡಿದೆ ವಿಶ್ವ ವಿಖ್ಯಾತ ಹಂಪಿ. 

ಹೊಸಪೇಟೆ: ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯುವ ಹಂಪಿ ಉತ್ಸವಕ್ಕೆ ಮದುವಣಗಿತ್ತಿಯಂತೆ ಸಿಂಗಾರ ಗೊಂಡಿದೆ ವಿಶ್ವ ವಿಖ್ಯಾತ ಹಂಪಿ. 

ನಾಲ್ಕು ಪ್ರಮುಖ ವೇದಿಕೆಗಳಲ್ಲಿ ಸ್ಥಳೀಯ ಮತ್ತು ರಾಷ್ಟ್ರೀ ಮಟ್ಟದ ಕಲಾವಿದರನ್ನ ಒಟ್ಟು ಗೂಡಿಸಿ ಈ ಬಾಗದ ಜನ ಸಾಮಾನ್ಯರಿಗೆ ಕಲೆಯ ರಸದೌತಣ ಬಡಿಸಲು ಬಳ್ಳಾರಿ ಜಿಲ್ಲಾಡಳಿತ ಈಗಾಗಲೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದು ನಾಳೆ ಸಂಜೆ ಅಧಿಕೃತವಾಗಿ ಚಾಲನೆ ಸಿಗಬೇಕಿದೆ.

ಹೌದು ನಾಳೆ ಸಂಜೆ ಹಂಪಿ ಉತ್ಸವಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಧಿಕೃತವಾಗಿ ಚಾಲನೆ ನೀಡಬೇಕಿದೆ, ಆದರೆ ಸಿ.ಎಂ.ಗೈರು ಹಾಜರಿಯಿಂದ ಹಂಪಿ ಉತ್ಸವ ಕೊಂಚ ಕಳೆ ಕಳೆದುಕೊಳ್ಳುತ್ತಿರುವ ಪರಿಣಾಮ ಕೊನೇಯ ಕ್ಷಣದಲ್ಲಿ ಯಡಿಯೂರಪ್ಪ ಬಾಗಿಯಾದರೂ ಆಶ್ಚರ್ಯ ಪಡಬೇಕಿಲ್ಲ.

ನಿಗದಿಯಂತೆ ಹಂಪಿಯ ಸ್ಮಾರಕಗಳ ಮದ್ಯ ನಾಲ್ಕು ವೇದಿಕೆಗಳು ಸಿದ್ದಗೊಂಡಿವೆ. ಈ ಬಾರಿ ಪ್ರಮುಖ ವೇದಿಕೆ ಎಂಬ ಪಟ್ಟವನ್ನ ಬಸವಣ್ಣ ಮಂಟಪ ಕಳೆದುಕೊಂಡಿದ್ದು, ಎರಡನೆ ವೇದಿಕೆಯಾಗಿ ಮುಂದುವರೆಯಲಿದೆ. ಅದೇ ರೀತಿಯಾಗಿ ಪ್ರಮುಖ ವೇದಿಕೆಯಾಗಿ ಗಾಯತ್ರಿ ಪೀಠ ವೇದಿಕೆ ಸಿದ್ದಗೊಂಡಿದ್ದು, ಒಂದು ವೇಳೆ ಸಿ.ಎಂ.ಯಡಿಯೂರಪ್ಪ ಕಾರ್ಯಕ್ರಮಕ್ಕೆ ಹಾಜರಾಗಿದ್ದೇ ಆದರೆ ಇದೇ ವೇದಿಕೆಯಿಂದ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. 

ಇನ್ನು ಈ ಸಂಬಂಧ ಹಂಪಿಯಲ್ಲಿ ವೇದಿಕೆಗಳು ಸೇರಿದಂತೆ ಪ್ರಮುಖ ಸ್ಮಾರಕಗಳಿಗೆ ಬಣ್ಣ ಬಣ್ಣದ ದೀಪಾಲಂಕಾರ ಮಾಡಲಾಗಿದ್ದು, ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿವೆ. ಇನ್ನು ಎರಡು ದಿನಗಳ ಕಾಲ ನಡೆಯುವ ಹಂಪಿ ಉತ್ಸವದಲ್ಲಿ ಈ ಬಾಗದ ಕಲಾ ರಸಿಕರನ್ನ ತಣಿಸಲು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರುಮಾಡಿದ ಕಲಾವಿದರು ಇಲ್ಲಿಗೆ ಆಗಮಿಸಿ ತಮ್ಮ ಪ್ರದರ್ಶನ ನೀಡಲಿದ್ದಾರೆ.

ಮೊದಲನೆ ದಿನ ಕನ್ನಡದ ಹೆಸರಾಂತ ಸಂಗೀತ ನಿರ್ದೇಶಕ ಮನೋ ಮೂರ್ತಿ ತಂಡದವರು ಪ್ರಮುಖ ವೇದಿಕೆಯಲ್ಲಿ ಪ್ರದರ್ಶನ ನೀಡಿದರೆ. ಎರಡನೆ ದಿನ ಖ್ಯಾತ ಹಿಂದಿ ಗಾಯಕಿ ನೀತಿ ಮೋಹನ್ ತಮ್ಮ ಸಂಗೀತ ರಸದೌತಣದಿಂದ ಉತ್ಸವಕ್ಕೆ ಮೆರಗು ನೀಡಲಿದ್ದಾರೆ. ಅಲ್ಲದೆ ವಿಜಯನಗರ ಸಾಮ್ರಾಜ್ಯದ ಘತ ವೈಭವವನ್ನ ಸಾರುವಂತ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಹಂಪಿಯ ಆನೆ ಲಾಳ ಮೈದಾನದಲ್ಲಿ ನಡೆಯಲಿದ್ದು, ಅದರ ಪ್ರಯೋಗಾರ್ಥ ಪ್ರದರ್ಶನ ಇಂದು ನಡೆಯಿತು. 

ಇನ್ನು ಈ ಬಾರಿಯ ಉತ್ಸವದಲ್ಲಿ ನಾಲ್ಕು ವೇದಿಕೆಗಳು ಮಾತ್ರ ನಿರ್ಮಾಣವಾಗುತಿವೆ, ಹಾಗಂತ ಉತ್ಸವಕ್ಕೆ ಬರುವ ಸಾರ್ವಜನಿಕರ ಸಂಖೆ ಮಾತ್ರ ಕಡಿಮೆಯಾಗುವುದಿಲ್ಲ. ಹಾಗಾಗಿ ಉತ್ಸವಕ್ಕೆ ಬರುವಂತ  ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹಂಪಿ ಮತ್ತು ಕಮಲಾಪುರ, ಕಡ್ಡಿರಾಂಪುರದ ಗ್ರಾಮದ ಬಳಿಯಲ್ಲಿ ವಾಹನ ನಿಲುಗಡೆಗೆ ಸ್ಥಳ ಗುರುತಿಸಲಾಗಿದೆ. ಒಟ್ಟಿನಲ್ಲಿ ಕಡಿಮೆ ವೇದಿಕೆಗಳಲ್ಲಿ ನಡೆಯುವ ಮೊದಲ ಹಂಪಿ ಉತ್ಸವ ಇದಾದರೂ ಅಚ್ಚುಕಟ್ಟಾಗಿ ಉತ್ಸವ ನಡೆಸುವುದಕ್ಕೆ ಏನೆಲ್ಲ ಸಿದ್ದತೆ ಬೇಕು ಅದನ್ನ ಮಾಡಿಕೊಂಡಿದೆ ಬಳ್ಳಾರಿ ಜಿಲ್ಲಾಡಳಿತ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT